ಸೋಮನಾಥ ಚಟರ್ಜಿ ಇನ್ನಿಲ್ಲ:  ಬಹು ಅಂಗಾಂಗ ವೈಫ‌ಲ್ಯದಿಂದ ನಿಧನ


Team Udayavani, Aug 14, 2018, 6:00 AM IST

31.jpg

ಕೋಲ್ಕತಾ/ಹೊಸದಿಲ್ಲಿ: “ಭದ್ರಲೋಕ್‌ ಕಮ್ಯೂನಿಸ್ಟ್‌’, “ಹೆಡ್‌ಮಾಸ್ತರ್‌’ ಎಂದೇ ಖ್ಯಾತರಾಗಿದ್ದ ಸೋಮನಾಥ ಚಟರ್ಜಿ ಸೋಮವಾರ ಬೆಳಗ್ಗೆ ಕೋಲ್ಕತಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದ್ದಾರೆ. 89 ವರ್ಷ ವಯಸ್ಸಿನ ಸೋಮನಾಥ ಚಟರ್ಜಿ ಅವರಿಗೆ ರವಿವಾರ ಲಘು ಹೃದಯಾಘಾತವಾಗಿತ್ತು. ಸೋಮ ವಾರ ಬೆಳಗ್ಗೆ ಬಹು ಅಂಗಾಂಗ ವೈಫ‌ಲ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಹತ್ತು ಬಾರಿ ಸಂಸದರಾಗಿದ್ದ ಚಟರ್ಜಿ ಅವರು, ಪತ್ನಿ ರೇಣು, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪ. ಬಂಗಾಲ ವಿಧಾನಸಭೆಗೆ ಒಯ್ದು ಸರ ಕಾರಿ ಗೌರವ ಸಲ್ಲಿಸಿದ ಬಳಿಕ ಅವರ ನಿವಾಸಕ್ಕೆ ಒಯ್ಯಲಾಯಿತು. ಇದಾದ ಬಳಿಕ ಎಸ್‌ಎಸ್‌ಕೆಎನ್‌ ಆಸ್ಪತ್ರೆಗೆ ದೇಹ ದಾನ ಮಾಡಲಾಯಿತು. 

ತಮ್ಮ ಜೀವನದುದ್ದಕ್ಕೂ ಎಡಪಂಥೀಯ ಸಿದ್ಧಾಂತ ರೂಢಿಸಿಕೊಂಡಿದ್ದ  ಸೋಮನಾಥ ಚಟರ್ಜಿ ಅವರು ಜ್ಯೋತಿ ಬಸು ಒಡನಾಡಿಯಾಗಿದ್ದರು. ದೇಶದ ಇತಿಹಾಸದಲ್ಲೇ ಮೊತ್ತಮೊದಲ ಬಾರಿಗೆ ಎಡಪಕ್ಷಗಳ ಕಡೆಯಿಂದ ಲೋಕಸಭೆಗೆ ಸ್ಪೀಕರ್‌ ಆದವರು ಚಟರ್ಜಿ. ಈ ಸಂದರ್ಭದಲ್ಲಿ ಯಾವುದೇ ಪಕ್ಷದ ಕೈಗೊಂಬೆಯಾಗದೆ ಕಾರ್ಯ ನಿರ್ವಹಿಸಿದ್ದರಿಂದ ತಮ್ಮ ಪಕ್ಷದಿಂದಲೇ ಉಚ್ಛಾಟನೆಗೂ ಒಳಗಾಗಬೇಕಾಯಿತು. 

 “ಸಂಸದೀಯ ಪ್ರಜಾಪ್ರಭುತ್ವವನ್ನು ಚಟರ್ಜಿ ಶ್ರೀಮಂತಗೊಳಿಸಿದ್ದರು. ಬಡವರು ಮತ್ತು ಸಮಾಜದ ಕಟ್ಟಕಡೆಯವರಿಗಾಗಿ ಧ್ವನಿ ಎತ್ತಿದ್ದರು’ ಎಂದು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಅವರು ಕೇವಲ ವ್ಯಕ್ತಿಯಾಗಿರಲಿಲ್ಲ, ಬದಲಾಗಿ ಸಂಸ್ಥೆಯಂತಿದ್ದರು. ಪಕ್ಷಭೇದವಿಲ್ಲದೆ ಎಲ್ಲರ ಕಡೆಯಿಂದಲೂ ಗೌರವ ಪಡೆಯುವಂಥ ವ್ಯಕ್ತಿತ್ವ ಇವರದ್ದಾಗಿತ್ತು. ಲೋಕಸಭೆ ಸ್ಪೀಕರ್‌ ಹುದ್ದೆಯ ಘನತೆಯನ್ನು ಎತ್ತಿಹಿಡಿದರು’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ. 

ಲೋಕಸಭೆಯ ಹಾಲಿ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಎಲ್‌.ಕೆ. ಆಡ್ವಾಣಿ, ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಕೆ.ಎನ್‌. ತ್ರಿಪಾಠಿ, ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌, ಅರುಣ್‌ ಜೇತ್ಲಿ, ಸುಷ್ಮಾ ಸ್ವರಾಜ್‌, ನಿರ್ಮಲಾ ಸೀತಾರಾಮನ್‌, ಪಿ. ಚಿದಂಬರಂ, ಶರದ್‌ ಪವಾರ್‌ ಸಹಿತ ಎಲ್ಲ ಪಕ್ಷಗಳ ನಾಯಕರು ಚಟರ್ಜಿ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. 

ವಾಪಸ್‌ ಸೇರಿಸಿಕೊಳ್ಳದ್ದಕ್ಕೆ ಸಿಪಿಎಂ ವಿಷಾದ
2004-09ರ ವರೆಗೆ ಚಟರ್ಜಿ ಲೋಕಸಭೆಯ ಸ್ಪೀಕರ್‌ ಆಗಿದ್ದರು. ಎಡಪಕ್ಷಗಳು ಯುಪಿಎ-1 ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌ ತೆಗೆದು ಕೊಂಡಿದ್ದವು. ಆಗ ಇವರಿಗೂ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು. ಆದರೆ ಅವರು ನಿರಾಕರಿಸಿದ್ದರು. ಸಿಪಿಎಂ ಇವರನ್ನು ಪಕ್ಷದಿಂದಲೇ ಉಚ್ಚಾಟಿಸಿತ್ತು. ಈಗ ಅವರ ಸಾವಿನ ಬಳಿಕ ಸಿಪಿಎಂ ನಾಯಕರು ವಿಷಾದ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.