ದೇಶ ಈಗ ಸಂಪೂರ್ಣ ಆತ್ಮವಿಶ್ವಾಸ ತಳೆದಿದೆ: ಪ್ರಧಾನಿ
Team Udayavani, Aug 15, 2018, 9:56 AM IST
ಹೊಸದಿಲ್ಲಿ: ದೇಶಾದ್ಯಂತ 72 ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ 5 ನೇ ಬಾರಿ ಧ್ವಜಾರೋಹಣ ನರೆವೇರಿಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.
ಭಾಷಣದ ಆರಂಭಕ್ಕೆ ತಮಿಳು ಕವಿ ಸುಬ್ರಹ್ಮಣ್ಯ ಭಾರತೀಯಾರ್ ಅವರ ಕವಿತೆಯ ಸಾಲುಗಳನ್ನು ತಮಿಳಿನಲ್ಲೇ ವಾಚಿಸಿದರು. ಭಾರತ ಭವ್ಯ ರಾಷ್ಟ್ರವಾಗಿ ಉದಯಿಸಿ ಇತರರಿಗೆ ಸ್ಫೂರ್ತಿಯಾಗಲಿದೆ. ಸಂಕೋಲೆಗಳನ್ನು ಕಳಚಿಕೊಂಡು ವಿಶಕ್ಕೆ ತೋರಿಸಿ ಕೊಡಲಿದೆ ಎಂದಿದ್ದಾರೆ. ಆ ದೆಸೆಯಲ್ಲಿ ನಾವು ಮುನ್ನಡೆಯಬೇಕು ಎಂದರು.
ದೇಶವಾಸಿಗಳು ಆತ್ಮ ವಿಶ್ವಾಸವನ್ನು ತಳೆದಿದ್ದು, ಹೊಸ ಕನಸುಗಳು ಮತ್ತು ಸಂಕಲ್ಪದೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ ಎಂದರು.
ನಮ್ಮ ದೇಶದ ತಾಯಂದಿರಿಗೆ ನಮ್ಮ ನಮನಗಳು.ನಮ್ಮ ನೌಕಾಪಡೆಯ 6 ಹೆಣ್ಣು ಮಕ್ಕಳು ಸಪ್ತ ಸಾಗರಗಳನ್ನು ದಾಟಿ ಬಂದಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದರು.
2022 ರ ವೇಳೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಭಾರತದ ನೌಕೆಯನ್ನು ಕಳುಹಿಸಿ ಅಲ್ಲಿಯೂ ತ್ರಿವರ್ಣ ಧ್ವಜ ಹಾರಿಸುವ ಗುರಿ ನಮ್ಮದಾಗಿದೆ ಎಂದರು.
ಒನ್ರ್ಯಾಂಕ್ ಒನ್ ಪೆನ್ಷನ್,ಸ್ವಚ್ಛ ಭಾರತದಂತಹ ಯೋಜನೆಗಳನ್ನು ಜಾರಿ ಮಾಡಿ ನಮ್ಮ ಬದ್ಧತೆಯನ್ನು ತೋರಿದ್ದೇವೆ ಎಂದರು.
ಈ ವರ್ಷ ಸಂಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆಯನ್ನು ಜಾರಿ ಮಾಡುತ್ತೇವೆ. ಇದು ಬಡವರಿಗೆ 5 ಲಕ್ಷ ರೂಪಾಯಿ ವರೆಗೆ ಚಿಕಿತ್ಸೆಗೆ ಹಣಕಾಸು ನೆರವು ನೀಡಲಿದೆ ಎಂದರು.
ಇಂದಿನ ಭಾರತದಲ್ಲಿ, ಸ್ವಜನಪಕ್ಷಪಾತಕ್ಕೆ ಅವಕಾಶವಿಲ್ಲ. ಎಲ್ಲಾ ಕೆಲಸಗಳನ್ನು ಪಾರದರ್ಶಕವಾಗಿ ಮಾಡಲಾಗುತ್ತಿದೆ ಎನ್ನುವುದನ್ನು ನಾವು ಖಚಿತಪಡಿಸಿದ್ದೇವೆ ಎಂದರು.
ತ್ರಿವಳಿ ತಲಾಖ್ನಿಂದಾಗಿ ಮುಸ್ಲಿಂ ಮಹಿಳೆಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಆ ಪದ್ದತಿಗೆ ಅಂತ್ಯ ಹಾಕಲು ಬದ್ಧರಾಗಿದ್ದೆವು. ಹಲವರು ನಮ್ಮನ್ನು ಈ ವಿಚಾರದಲ್ಲಿ ವಿರೋಧಿಸಿದ್ದರು ಎಂದರು.
ಕಾಶ್ಮೀರದಲ್ಲಿ ಬಂದೂಕಿನಿಂದ ಎಲ್ಲದಕ್ಕೂ ಪರಿಹಾರ ಸಾಧ್ಯವಿಲ್ಲ. ಅಟಲ್ ಜಿ ಅವರ ಆಶಯದಂತೆ ಶಾಂತಿ ನೆಲೆಸಲು ಮುಂದಾಗಿದ್ದೇವೆ.ಬಂಡುಕೋರರಿಂತ ತತ್ತರಿಸಿದ್ದ ತ್ರಿಪುರಾ, ಅರುಣಾಚಲದಲ್ಲಿ ಈಗ ಶಾಂತಿ ನೆಲೆಸಿದೆ. ಈಶಾನ್ಯ ರಾಜ್ಯಗಳು ದೆಹಲಿಗೆ ಹತ್ತಿರವಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ