ಮೋದಿ ಸರಕಾರದ ನೀತಿಗೆ ರಾಜನ್ ಮೆಚ್ಚುಗೆ ಮಾತು
Team Udayavani, Aug 25, 2018, 6:00 AM IST
ಹೊಸದಿಲ್ಲಿ: ಕೇಂದ್ರದ ನರೇಂದ್ರ ಮೋದಿ ಸರಕಾರ ಕೈಗೊಂಡಿರುವ ವಿತ್ತೀಯ ಕೊರತೆ ಕ್ರಮಗಳಿಗೆ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ವಿತ್ತ ವರ್ಷದಲ್ಲಿ ಚಾಲ್ತಿ ಖಾತೆ ಕೊರತೆ(ಸಿಎಡಿ)ಯನ್ನು ನಿರ್ವಹಿಸಬೇಕಿದೆ ಹಾಗೂ ಸೂಕ್ಷ್ಮ ಆರ್ಥಿಕತೆಯ ಮೇಲೆ ಕಣ್ಣಿಡಬೇಕಿದೆ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ತೈಲ ದರ ಏರಿಕೆಯಾಗಿರುವುದರಿಂದಾಗಿ ಈ ವಿತ್ತ ವರ್ಷದಲ್ಲಿ ಚಾಲ್ತಿ ಖಾತೆ ಕೊರತೆ ಶೇ.2.8ಕ್ಕೆ ಏರಿಕೆಯಾಗಲಿದೆ ಎಂದು ಹಲವು ವಿತ್ತ ವಿಶ್ಲೇಷಣಾ ಸಂಸ್ಥೆಗಳು ಈಗಾಗಲೇ ಊಹಿಸಿವೆ. ಸರಕಾರ ಚಾಲ್ತಿ ಖಾತೆ ಕೊರತೆ ಗುರಿಯನ್ನು ತಲುಪುವ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ.
ರೂಪಾಯಿ ಚಿಂತೆಗೀಡು ಮಾಡುವ ಮಟ್ಟಕ್ಕೆ ಮೌಲ್ಯ ಕಳೆದುಕೊಂಡಿಲ್ಲ. ಡಾಲರ್ ಮೌಲ್ಯ ಹೆಚ್ಚಿರುವುದರಿಂದ ಹೀಗಾಗಿದೆ. ಯುಪಿಎ ಅವಧಿಯಲ್ಲಿ ಕೈಗೊಂಡ ವಿವಾದಿತ 80:20 ಚಿನ್ನ ಆಮದು ಯೋಜನೆಯ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ ರಾಜನ್, ಆಗಿನ ವಿತ್ತೀಯ ಪರಿಸ್ಥಿತಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ