ನೋವಿನ ನಡುವೆಯೇ ಸರಳ ಓಣಂ ಆಚರಣೆ


Team Udayavani, Aug 26, 2018, 6:00 AM IST

z-19.jpg

ತಿರುವನಂತಪುರ: ಪ್ರವಾಹ ದುಸ್ಥಿತಿ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸಹ ಓಣಂ ಹಬ್ಬದ ವೈಭವದ ಆಚರಣೆಗೆ ಬ್ರೇಕ್‌ ಹಾಕಿದೆ. ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ಮಾದರಿಯಲ್ಲಿ ಈ ಬಾರಿಯ ಓಣಂನಂದು ನಡೆಸಲು ಉದ್ದೇಶಿಸಲಾಗಿದ್ದ “ಚಾಂಪಿಯನ್ಸ್‌ ಬೋಟ್‌ ಟ್ರೋಫಿ’ಯ ಉದ್ಘಾಟನೆ  ಮುಂದೂಡಲಾಗಿದೆ. 28ರಂದು ತ್ರಿಶೂರ್‌ನಲ್ಲಿ ನಡೆಯಬೇಕಿದ್ದ  “ಪುಲಿಕಲಿ’ (ಹುಲಿವೇಷ) ಸ್ಪರ್ಧೆ ರದ್ದುಗೊಳಿಸಲಾಗಿದೆ. ಕೊಚ್ಚಿಯ ತ್ರಿಕಾಕ್ಕರ ದೇಗುಲದಲ್ಲಿ ಸಾಂಪ್ರದಾಯಿಕ ಸಾದ್ಯ ಆಚರಣೆಯನ್ನು ರದ್ದುಗೊಳಿಸಲಾಗಿದೆ. ಮಹಾವಿಷ್ಣುವಿನ ವಾಮನ ಅವತಾರದಿಂದ ಬಲಿ ಚಕ್ರವರ್ತಿ ಸಂಹಾರವಾದ ಐತಿಹ್ಯ ಹೊಂದಿರುವ ತ್ರಿಕಾಕ್ಕರ ದೇಗುಲದಲ್ಲಿ “ಓಣಂ ಸಾದ್ಯ’ ಆಚರಣೆ ರದ್ದುಗೊಳಿಸಲಾಗಿತ್ತು. 

ಹೊಸ ಆ್ಯಪ್‌, ಪರಿಹಾರ: ಏತನ್ಮಧ್ಯೆ, ಪ್ರವಾಹ ಪೀಡಿತ ಪ್ರಾಂತ್ಯಗಳಲ್ಲಿನ ಅವ್ಯವಸ್ಥೆಗಳನ್ನು ಬೇಗನೇ ಸ್ಥಳೀಯ ಸರಕಾರಗಳ ಗಮನಕ್ಕೆ ತರುವ ಉದ್ದೇಶದಿಂದಾಗಿ, ಸರಕಾರ ಹೊಸ ಆ್ಯಪ್‌ ವ್ಯವಸ್ಥೆ ಜಾರಿಗೆ ತಂದಿಗೆ. ಜನರು ತಾವಿರುವ ವಾಸಸ್ಥಳದಲ್ಲಿರುವ ಅವ್ಯವಸ್ಥೆಯನ್ನು ಮೊಬೈಲ್‌ಗಳಲ್ಲಿ ಚಿತ್ರೀಕರಿಸಿ ವಿಡಿಯೋ ತುಣುಕನ್ನು ಈ ಆ್ಯಪ್‌ನಲ್ಲಿ ಅಪ್ಲೋಡ್‌ ಮಾಡಿ ತ್ವರಿತ ಸಹಾಯ ಪಡೆಯಬಹುದು. ಮುಖ್ಯಮಂತ್ರಿ ಸಂತ್ರಸ್ತರ ಪರಿಹಾರ ನಿಧಿಯಿಂದ 3.9 ಲಕ್ಷ ಕುಟುಂಬಗಳ ಪ್ರತಿಯೊಬ್ಬ ಸದಸ್ಯನ ಬ್ಯಾಂಕ್‌ ಖಾತೆಗೆ ತಲಾ 10,000 ರೂ. ಹಾಕಲು ಸರಕಾರ ತೀರ್ಮಾನಿಸಿದೆ. 

ಆ್ಯಪಲ್‌ನಿಂದ 7 ಕೋಟಿ ರೂ.: ಕೇರಳ ಸಂತ್ರಸ್ತರ ಪುನರ್ವಸತಿಗಾಗಿ ಖಾಸಗಿ ಸಂಸ್ಥೆಗಳ ಸಹಾಯ ಮುಂದುವರಿದಿದೆ. ಆ್ಯಪಲ್‌ ಸಂಸ್ಥೆ 7ಕೋ ರೂ. ದೇಣಿಗೆ ನೀಡಿದೆ. 

ಓಣಂ ಆತ್ಮ ಸ್ಥೈರ್ಯ ತರಲಿ: ಪ್ರಧಾನಿ
ಟ್ವಿಟರ್‌ನಲ್ಲಿ ಓಣಂ ಶುಭಾಶಯ ಸಲ್ಲಿಸಿರುವ ಪ್ರಧಾನಿ ಮೋದಿ, ಈ ಬಾರಿಯ ಓಣಂ ಕೇರಳದ ಜನರಿಗೆ ಮಾನಸಿಕ ಸ್ಥೈರ್ಯ ತರಲಿ ಎಂದು ಆಶಿಸಿದ್ದಾರೆ. ಜತೆಗೆ, ಕೇರಳದ ಬೆನ್ನಿಗೆ ಕೇಂದ್ರ ಸರಕಾರ ಎಂದಿಗೂ ಇರಲಿದೆ ಎಂಬ ಭರವಸೆಯ ಮಾತುಗಳನ್ನಾಡಿದ್ದಾರೆ.

ಸಾವಿನ ಸಂಖ್ಯೆ 265 ಏರಿಕೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಆ.8ರಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 265. ನಾಪತ್ತೆಯಾದ 36 ಮಂದಿಯ ಸುಳಿವು ಸಿಕ್ಕಿಲ್ಲ. ಇದೇ ವೇಳೆ, ಪ್ರವಾಹ ಪೀಡಿತ ಪ್ರಾಂತ್ಯದಲ್ಲಿ 1,31,683 ಮನೆಗಳ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿದೆ. ಕೆಟ್ಟು ಹೋಗಿದ್ದ 23.36 ಲಕ್ಷ ಟ್ರಾನ್ಸ್‌ಫಾರ್ಮರ್‌ಗಳನ್ನು ದುರಸ್ತಿಗೊಳಿಸಲಾಗಿದೆ ಎಂದು ಕೇರಳ ಸರಕಾರ ಹೇಳಿದೆ. ರಾಜ್ಯದಲ್ಲಿ ಹಾಳಾಗಿರುವ ಒಟ್ಟಾರೆ ಮನೆಗಳಲ್ಲಿ ಶೇ.31 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ. ಹಾನಿಗೀಡಾದ ಸಣ್ಣ ಪ್ರಮಾಣದ ಉದ್ದಿಮೆಗಳಿಗೆ ತಲಾ 10 ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡಲು ನಿರ್ಧರಿಸಲಾಗಿದೆ. 
 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.