ನೋಟು ನಿಷೇಧದಿಂದ ಏನು ಸಾಧಿಸಿದ್ದೀರಿ? ಪ್ರಧಾನಿ ಮೋದಿಗೆ ರಾಹುಲ್
Team Udayavani, Aug 30, 2018, 6:25 PM IST
ನವದೆಹಲಿ: ನೋಟು ಅಮಾನ್ಯೀಕರಣ ಕ್ರಮ ತಪ್ಪಲ್ಲ, ಆದರೆ ದೊಡ್ಡ ಬಂಡವಾಳಶಾಹಿ ಕುಳಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಜನಸಾಮಾನ್ಯರು ಕಷ್ಟ ಅನುಭವಿಸುವಂತಾಯಿತು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನೋಟು ನಿಷೇಧ ಇದೊಂದು ದೊಡ್ಡ ಹಗರಣಕ್ಕಿಂತ ಕಡಿಮೆಯೇನಲ್ಲ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ ಅವರು, ಆರ್ ಬಿಐನ ವಾರ್ಷಿಕ ವರದಿ ಪ್ರಕಾರ, 2016ರ ನವೆಂಬರ್ 8ರಂದು ಪ್ರಧಾನಿ ಮೋದಿ ಅವರು ನಿಷೇಧಿಸಿದ್ದ 500 ರೂ. ಹಾಗೂ 1000 ರೂಪಾಯಿ ನೋಟುಗಳು ಶೇ.99ರಷ್ಟು ವಾಪಸ್ ಬಂದಿರುವುದಾಗಿ ತಿಳಿಸಿದೆ.
ಈ ತಪ್ಪಿಗಾಗಿ ನೀವು (ಪ್ರಧಾನಿ) ಕ್ಷಮೆ ಕೇಳಬೇಕಿತ್ತು. ಆದರೆ ಪ್ರಧಾನಿ ಮೋದಿ ಅವರು ಅದನ್ನು ತುಂಬಾ ಬುದ್ಧಿವಂತಿಕೆಯಿಂದ ನುಣುಚಿಕೊಂಡಿದ್ದಾರೆ ಎಂದು ಹೇಳಿದರು.
ನೋಟು ನಿಷೇಧದಿಂದ ಕಪ್ಪು ಹಣ ಹೊರತರಲು ಹಾಗೂ ಭ್ರಷ್ಟಾಚಾರ ಮಟ್ಟಹಾಕಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರ ವಿಶ್ಲೇಷಿಸಿತ್ತು. ಆದರೆ 2016ರ ನವೆಂಬರ್ 8ರಂದು 15.41 ಲಕ್ಷ ಕೋಟಿ ರೂ.ಮೌಲ್ಯದ 500, 1000 ರೂ. ಮುಖಬೆಲೆಯ ನೋಟುಗಳು ಚಲಾವಣೆಯಲ್ಲಿದ್ದವು. ಅವುಗಳಲ್ಲಿ 15.31 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ವಾಪಸ್ ಬಂದಿದೆ. ಅಂದರೆ 10, 720 ಕೋಟಿ ರೂ. ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ವಾಪಾಸ್ಸಾಗಿಲ್ಲ. ಇದರಿಂದ ಕೇಂದ್ರ ಸರ್ಕಾರ ಏನು ಸಾಧಿಸಿದಂತಾಗಿದೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ. ನೋಟು ಅಮಾನ್ಯೀಕರಣದಿಂದ ದೇಶದ ಆರ್ಥಿಕ ಸ್ಥಿತಿ ಹಳಿ ತಪ್ಪಿದಂತಾಗಿದೆ ಎಂದು ರಾಹುಲ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ