ನಾಳೆಯಿಂದ ವಾಹನ ವಿಮೆ ದುಬಾರಿ


Team Udayavani, Aug 31, 2018, 6:00 AM IST

46.jpg

ಮುಂಬಯಿ: ಮುಂದಿನ ತಿಂಗಳಿನಿಂದ (ಸೆ. 1) ಕಾರು ಮತ್ತು ದ್ವಿಚಕ್ರ ವಾಹನ ಖರೀದಿ ಮಾಡುವವರು ಗಮನಿಸಲೇಬೇಕಾದ ಸುದ್ದಿ ಇದು. ಥರ್ಡ್‌ ಪಾರ್ಟಿ ವಿಮೆ ಮೊತ್ತ ಗಣನೀಯ ಹೆಚ್ಚಾಗಲಿದೆ. ಕಾರುಗಳಿಗೆ ಮೂರು ವರ್ಷ ಮತ್ತು ಬೈಕ್‌ಗಳಿಗೆ 5 ವರ್ಷಗಳ ವಿಮೆ ಮೊತ್ತದಲ್ಲಿ ಶೇ.2.45ರಿಂದ 5.61ರ ವರೆಗೆ ಹೆಚ್ಚಾಗಲಿದೆ. ಆದರೆ ಪ್ರತೀ ವರ್ಷ ವಿಮೆಯ ಮರು ನವೀಕರಣ ಮಾಡುವ ಸಮಸ್ಯೆ ವಾಹನಗಳ ಮಾಲಕರಿಗೆ ಇರುವುದಿಲ್ಲ. ಜೂ.20ರಂದು ಸುಪ್ರೀಂ ಕೋರ್ಟ್‌ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ವಿಮೆಯ ಮೊತ್ತದಲ್ಲಿ ಪರಿಷ್ಕರಣೆ ಆಗಲಿದೆ.

1,500 ಸಿಸಿ ಮೀರಿದ ಕಾರುಗಳಿಗೆ ವಿಮೆ ಮೊತ್ತ 24,305 ರೂ.ಆಗಿದ್ದು, ಸದ್ಯ ಅದು 7,890 ರೂ. ಆಗಿದೆ. 350 ಸಿಸಿಗಿಂತ ಹೆಚ್ಚಿನ ಸಾಮರ್ಥ್ಯದ ಬೈಕ್‌ಗಳಿಗೆ ಹಾಲಿ 2,323 ರೂ.ಇದ್ದು, ಮುಂದೆ 13,024 ರೂ. ಪಾವತಿ ಮಾಡಬೇಕಾಗುತ್ತದೆ.  ವಾಹನಗಳ ಮಾಡೆಲ್‌ಗ‌ಳನ್ನು ಆಧರಿಸಿ ವಿಮೆಯ ಮೊತ್ತ ಬದಲಾವಣೆಯಾಗಲಿದೆ. ವರ್ಷ ಕಳೆದಂತೆ ವಾಹನಗಳ ಮೌಲ್ಯ ಕಡಿಮೆಯಾಗುವುದರಿಂದ ಮಾಲಕರು ವಿಮೆ ನವೀಕರಣಕ್ಕೆ ಮುಂದಾಗುವುದಿಲ್ಲ ಅಥವಾ ರಿಸ್ಕ್ ಫ್ಯಾಕ್ಟರ್‌ ಇಲ್ಲದ ಪಾಲಿಸಿ ಖರೀದಿ ಮಾಡುತ್ತಾರೆ. ಹೊಸ ಕ್ರಮದಿಂದ ವಾಹನ ವಿಮೆಯು ಎಲ್ಲ ವಾಹನಗಳನ್ನು ಒಳಗೊಳ್ಳುವಂತಾಗುತ್ತದೆ ಎಂದು ವಾಹನೋದ್ಯಮ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರಕಾರ ಅಪಘಾತಗಳಿಂದ ಉಂಟಾದ ಸಾವು ನೋವಿನ ಬಗ್ಗೆ ಸಿದ್ಧಪಡಿಸಿದ ವರದಿಯ ಪ್ರಕಾರ ಪ್ರತಿದಿನ 1,374 ಅಪಘಾತಗಳು ಉಂಟಾಗಿ, 400 ಮಂದಿ ಅಸುನೀಗುತ್ತಿದ್ದಾರೆ. ಅಪಘಾತಗಳಿಗೆ ಸಂಬಂಧಿಸಿದ ಕ್ಲೇಮ್‌ಗಳು ತಪ್ಪಾಗಿದ್ದರೆ ಸಿಗುವ ವಿಮಾ ಮೊತ್ತ ಕಡಿಮೆಯಾಗುತ್ತದೆ. ಸೆ.1ರಿಂದ ವಿಮಾ ಕಂಪೆನಿಗಳು ದೀರ್ಘಾವಧಿಯ ವಾಹನ ವಿಮೆ ಪಾಲಿಸಿ ನೀಡುವಂತೆ ಸೂಚನೆ ನೀಡಲಾಗಿದೆ. ಹೊಸ ಕಾರುಗಳಿಗೆ 3 ವರ್ಷ ಮತ್ತು ಹೊಸ ಬೈಕ್‌ಗಳಿಗೆ 5ವರ್ಷದ ಅವಧಿಗೆ ವಿಮಾ ಮೊತ್ತ ಸಂಗ್ರಹಿಸುವ ಬಗ್ಗೆ ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ ವಿಮಾ ಕಂಪೆನಿಗಳಿಗೆ ಸೂಚಿಸಿದೆ. ಸ್ವಂತ ಅಪಘಾತದಿಂದ ಉಂಟಾದ ಹಾನಿ ಮತ್ತು ಇತರರಿಂದ ಉಂಟಾದ (ಥರ್ಡ್‌ ಪಾರ್ಟಿ) ಅಥವಾ ಎರಡೂ ವಿಚಾರ ಸೇರಿರುವ ವಿಮೆ ಒದಗಿಸುವಂತೆ ಸೂಚಿಸಿದೆ. ವಿಮೆ ಹೊಂದಿರುವ ವ್ಯಕ್ತಿ ವಿಮಾ ಅವಧಿಯಲ್ಲಿ ಥರ್ಡ್‌ ಪಾರ್ಟಿ ವಿಚಾರವನ್ನು ರದ್ದು ಮಾಡಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.