ಪ್ರವಾಹದ ಬಳಿಕ ಇಲಿ ಜ್ವರ!
Team Udayavani, Sep 1, 2018, 6:00 AM IST
ತಿರುವನಂತಪುರಂ: ಪ್ರವಾಹದ ಭೀಕರತೆಯಿಂದ ಸಾವರಿಸಿಕೊಳ್ಳುತ್ತಿದ್ದಂತೆಯೇ ಕೇರಳದಲ್ಲಿ ಈಗ ಇಲಿ ಜ್ವರ ಜನರ ಜೀವನದ ಜೊತೆ ಚೆಲ್ಲಾಟ ಆರಂಭಿಸಿದೆ. ಕಳೆದ 3 ದಿನಗಳಲ್ಲಿ 12 ಜನರು ಇಲಿ ಜ್ವರದಿಂದ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ.28 ರಂದೇ ರಾಜ್ಯ ಆರೋಗ್ಯ ಇಲಾಖೆ ಈ ಸಂಬಂಧ ಸೂಚನೆ ಹೊರಡಿಸಿದ್ದು, ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರೂ ಅದನ್ನು ಮೊದಲು ಇಲಿ ಜ್ವರವೇ ಎಂಬುದಾಗಿ ಪರಿಶೀಲಿಸಬೇಕು ಎಂದು ಸೂಚಿಸಿದೆ. ಆರೋಗ್ಯ ಇಲಾಖೆ ಈ ಸೂಚನೆ ಹೊರಡಿಸುತ್ತಿದ್ದಂತೆಯೇ ಆತಂಕ ಜನರಲ್ಲಿ ಮನೆ ಮಾಡಿದೆ.
ಲೆಪ್ಟೋಸ್ಪಿರೋಸಿಸ್ ಎಂದು ಕರೆಯಲಾಗುವ ಈ ರೋಗ ತ್ರಿಶೂರ್, ಪಾಲಕ್ಕಾಡ್, ಕಲ್ಲಿಕೋಟೆ, ಮಳಪ್ಪುರಂ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು, ಕಲುಷಿತಗೊಂಡ ನೀರು ಸೇವನೆಯಿಂದ ಹರಡಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಸಾಮಾನ್ಯವಾಗಿ ಪ್ರಾಣಿಯಿಂದ ಮನುಷ್ಯನಿಗೆ ನೀರಿನ ಮೂಲಕ ಹರಡುತ್ತದೆ. 20 ವರ್ಷಗಳ ಹಿಂದೆ ಕೂಡ ಇಲಿ ಜ್ವರ ವ್ಯಾಪಕವಾಗಿ ಹರಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ