ಪಾಕ್ ಬೊಗಳೆಗೆ ಭಾರತ ತಿರುಗೇಟು
Team Udayavani, Sep 1, 2018, 6:00 AM IST
ನವದೆಹಲಿ: ಸಿಂಧೂ ನದಿ ನೀರು ಹಂಚಿಕೆ ಸಂಬಂಧ ನಡೆದ ಮಾತುಕತೆಯ ಕುರಿತು ಪಾಕಿಸ್ತಾನ ಬಿಟ್ಟಿರುವ ಬೊಗಳೆಯನ್ನು ಭಾರತ ಖಂಡಿಸಿದ್ದು ವಾಸ್ತವ ಸಂಗತಿಯನ್ನು ತೆರೆದಿಟ್ಟಿದೆ. ಸಿಂಧೂ ನದಿಯುದ್ದಕ್ಕಿರುವ ಎರಡೂ ದೇಶಗಳ ಜಲವಿದ್ಯುತ್ ಯೋಜನೆಗಳಿಗೆ ಪರಸ್ಪರ ದೇಶಗಳ ನಿಯೋಗ ತೆರಳಲು ಗುರುವಾರ ಮುಕ್ತಾಯಗೊಂಡ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿದ್ದವು. ಆದರೆ ಪಾಕಿಸ್ತಾನ ಪತ್ರಿಕಾಗೋಷ್ಠಿ ನಡೆಸಿ, ಭಾರತದ ಜಲವಿದ್ಯುತ್ ಯೋಜನೆಗಳನ್ನಷ್ಟೇ ಪಾಕಿಸ್ತಾನ ತಪಾಸಣೆ ನಡೆಸಲು ಸಭೆಯಲ್ಲಿ ಒಪ್ಪಿಗೆ ಪಡೆದುಕೊಳ್ಳಲಾಯಿತು. ಇದು ತನ್ನ ಗೆಲುವು ಎಂದು ಸುಳ್ಳು ಹೇಳಿತ್ತು.
ಪಾಕಿಸ್ತಾನದ ಹುಸಿವಾದವನ್ನು ತಳ್ಳಿಹಾಕಿರುವ ಭಾರತದ ವಿದೇಶಾಂಗ ಇಲಾಖೆ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿದ್ದು, ಎರಡು ದಿನಗಳ ಸಭೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಪಾಕಲ್ ದುಲ್ (1000 ಮೆವ್ಯಾ) ಹಾಗೂ ಲೋವರ್ ಕಲಾನಿ (48 ಮೆವ್ಯಾ) ಸಹಿತ ವಿವಿಧ ಜಲವಿದ್ಯುತ್ ಯೋಜನೆಗಳ ಅನುಷ್ಠಾನದ ಕುರಿತು ತಾಂತ್ರಿಕ ಚರ್ಚೆಗಳು ನಡೆದವು. ಎರಡೂ ದೇಶಗಳು ಸಿಂಧೂ ಕಣಿವೆಯಲ್ಲಿರುವ ಪರಸ್ಪರರ ಯೋಜನೆಗಳನ್ನು ವೀಕ್ಷಿಸಲು ಒಪ್ಪಿಕೊಂಡಿವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು