ಪಾಕ್ ಬೊಗಳೆಗೆ ಭಾರತ ತಿರುಗೇಟು
Team Udayavani, Sep 1, 2018, 6:00 AM IST
ನವದೆಹಲಿ: ಸಿಂಧೂ ನದಿ ನೀರು ಹಂಚಿಕೆ ಸಂಬಂಧ ನಡೆದ ಮಾತುಕತೆಯ ಕುರಿತು ಪಾಕಿಸ್ತಾನ ಬಿಟ್ಟಿರುವ ಬೊಗಳೆಯನ್ನು ಭಾರತ ಖಂಡಿಸಿದ್ದು ವಾಸ್ತವ ಸಂಗತಿಯನ್ನು ತೆರೆದಿಟ್ಟಿದೆ. ಸಿಂಧೂ ನದಿಯುದ್ದಕ್ಕಿರುವ ಎರಡೂ ದೇಶಗಳ ಜಲವಿದ್ಯುತ್ ಯೋಜನೆಗಳಿಗೆ ಪರಸ್ಪರ ದೇಶಗಳ ನಿಯೋಗ ತೆರಳಲು ಗುರುವಾರ ಮುಕ್ತಾಯಗೊಂಡ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿದ್ದವು. ಆದರೆ ಪಾಕಿಸ್ತಾನ ಪತ್ರಿಕಾಗೋಷ್ಠಿ ನಡೆಸಿ, ಭಾರತದ ಜಲವಿದ್ಯುತ್ ಯೋಜನೆಗಳನ್ನಷ್ಟೇ ಪಾಕಿಸ್ತಾನ ತಪಾಸಣೆ ನಡೆಸಲು ಸಭೆಯಲ್ಲಿ ಒಪ್ಪಿಗೆ ಪಡೆದುಕೊಳ್ಳಲಾಯಿತು. ಇದು ತನ್ನ ಗೆಲುವು ಎಂದು ಸುಳ್ಳು ಹೇಳಿತ್ತು.
ಪಾಕಿಸ್ತಾನದ ಹುಸಿವಾದವನ್ನು ತಳ್ಳಿಹಾಕಿರುವ ಭಾರತದ ವಿದೇಶಾಂಗ ಇಲಾಖೆ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿದ್ದು, ಎರಡು ದಿನಗಳ ಸಭೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಪಾಕಲ್ ದುಲ್ (1000 ಮೆವ್ಯಾ) ಹಾಗೂ ಲೋವರ್ ಕಲಾನಿ (48 ಮೆವ್ಯಾ) ಸಹಿತ ವಿವಿಧ ಜಲವಿದ್ಯುತ್ ಯೋಜನೆಗಳ ಅನುಷ್ಠಾನದ ಕುರಿತು ತಾಂತ್ರಿಕ ಚರ್ಚೆಗಳು ನಡೆದವು. ಎರಡೂ ದೇಶಗಳು ಸಿಂಧೂ ಕಣಿವೆಯಲ್ಲಿರುವ ಪರಸ್ಪರರ ಯೋಜನೆಗಳನ್ನು ವೀಕ್ಷಿಸಲು ಒಪ್ಪಿಕೊಂಡಿವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ