ಜೈನ ಮುನಿ ತರುಣ ಸಾಗರ ಜಿನೈಕ್ಯ
Team Udayavani, Sep 2, 2018, 6:00 AM IST
ಹೊಸದಿಲ್ಲಿ: ಜೈನ ಮುನಿ ತರುಣ ಸಾಗರ ಮಹಾರಾಜ್ (51) ಶನಿವಾರ ಮುಂಜಾವ 3 ಗಂಟೆಗೆ ದಿಲ್ಲಿಯ ರಾಧಾಪುರಿ ಜೈನ ದೇಗುಲದಲ್ಲಿ ಜಿನೈಕ್ಯ ರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ತಮ್ಮ ಚಾತುರ್ಮಾಸ ಸ್ಥಳವಾದ ರಾಧಾಪುರಿ ಜೈನ ದೇಗುಲಕ್ಕೆ ವಾಪಸಾಗಿ, ಔಷಧ ಸೇವನೆ ನಿಲ್ಲಿಸಿ ಸಲ್ಲೇಖನ ವ್ರತ ಆರಂಭಿಸಿದ್ದರು. ಗುರುವಾರ ಆರೋಗ್ಯ ಬಿಗಡಾಯಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಂತ್ಯ ಸಂಸ್ಕಾರವು ಜೈನ ಮುನಿ ಸೌರಭ ಸಾಗರರ ಸಮ್ಮುಖದಲ್ಲಿ ಮೋದಿ ನಗರದಲ್ಲಿರುವ ತರುಣ ಸಾಗರ ಧಾಮದಲ್ಲಿ ನಡೆಸಲಾಗಿದೆ. ತರುಣ ಸಾಗರ ಮಹಾರಾಜರ ನಿಧನಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್ ಸಹಿತ ದೇಶದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ತಮ್ಮ ವಿಶಿಷ್ಟ ವಿಚಾರಧಾರೆಗಳಿಂದ ಹೆಸರಾಗಿದ್ದ ತರುಣ ಸಾಗರಜೀ, ಹರಿಯಾಣ ಹಾಗೂ ಮಧ್ಯಪ್ರದೇಶ ವಿಧಾನಸಭೆಯನ್ನು ಉದ್ದೇಶಿಸಿಯೂ ಪ್ರವಚನ ನೀಡಿದ್ದರು. ಹರಿಯಾಣ ವಿಧಾನಸಭೆಯಲ್ಲಿ ಅವರ ಪ್ರವಚನ ವಿವಾದ ಉಂಟು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ