ಹಾರ್ದಿಕ್ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ: 20 ಕಿಲೋ ಇಳಿದ ದೇಹತೂಕ
Team Udayavani, Sep 4, 2018, 3:49 PM IST
ಅಹ್ಮದಾಬಾದ್ : ಪಾಟಿದಾರ್ ಸಮುದಾಯಕ್ಕೆ ಮೀಸಲಾತಿಯನ್ನು ಆಗ್ರಹಿಸಿ ಕಳೆದ 11 ದಿನಗಳಿಂದ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರ ದೇಹ ತೂಕ 20 ಕೆಜಿ ನಷ್ಟವಾಗಿದೆ.
ನಿರಶನ ಸತ್ಯಾಗ್ರಹ ಆರಂಭಕ್ಕೆ ಮುನ್ನ 78 ಕೆಜಿ ಇದ್ದ ಹಾರ್ದಿಕ್ ಈಗ 58 ಕೆಜಿಗೆ ಇಳಿದಿದ್ದಾರೆ ಎಂದು ಅವರೊಂದಿಗಿರುವ ವೈದ್ಯರು ತಿಳಿಸಿದ್ದಾರೆ. ಹಾರ್ದಿಕ್ ದೈಹಿಕವಾಗಿ ತುಂಬ ದುರ್ಬಲರಾಗಿದ್ದಾರೆ ಎಂದವರು ಹೇಳಿದ್ದಾರೆ.
ಈ ನಡುವೆ ಸರಕಾರದ ಸೂಚನೆಯ ಪ್ರಕಾರ ಸೋಲಾ ಸಿವಿಲ್ ಹಾಸ್ಪಿಟಲ್, ಸಕಲ ಸೌಕರ್ಯ ಹೊಂದಿರುವ “ಐಸಿಯು ಆನ್ ವೀಲ್ಸ್’ ಪರಿಪೂರ್ಣ ಅಂಬುಲೆನ್ಸ್ ವಾಹನವನ್ನು ಹಾರ್ದಿಕ್ ನಿರಶನ ತಾಣದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.
ತನ್ನ ನಿವಾಸಕ್ಕೆ ಭೇಟಿಕೊಡುತ್ತಿರುವ ಜನರಿಗೆ ಪೊಲೀಸರು ಕಿರುಕುಳ ಕೊಡುವುದನ್ನು ನಿಲ್ಲಿಸುವ ತನಕ ತನ್ನ ಮೇಲೆ ವೈದ್ಯಕೀಯ ಚಿಕಿತ್ಸೆ ನಡೆಸುವುದಕ್ಕೆ ತಾನು ವೈದ್ಯರಿಗೆ ಅವಕಾಶ ಕೊಡುವುದಿಲ್ಲ ಎಂದು ಹಾರ್ದಿಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ