ಮಧ್ಯಪ್ರದೇಶ : ಹೆತ್ತ ತಾಯಿಯ ಮೇಲೆ ಮಗನಿಂದ ಅತ್ಯಾಚಾರ, ಅರೆಸ್ಟ್‌


Team Udayavani, Sep 4, 2018, 4:35 PM IST

rape-foce-600.jpg

ಬರ್ವಾನಿ, ಮಧ್ಯ ಪ್ರದೇಶ : 45 ವರ್ಷ ಪ್ರಾಯದ ಹೆತ್ತ ತಾಯಿಯ ಮೇಲೆ 30ರ ಹರೆಯದ ವಿವಾಹಿತ ಮಗನು ಅತ್ಯಾಚಾರ ನಡೆಸಿದ ಅತ್ಯಂತ ನಿರ್ಲಜ್ಜೆಯ ಘಟನೆ ಜಿಲ್ಲೆಯ ಸುರಾನಿ ಗ್ರಾಮದಲ್ಲಿನ ಮನೆಯೊಂದರಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರೇಪ್‌ ಕೃತ್ಯ ಎಸಗಿರುವ ಆರೋಪಿ ಮಗನನ್ನು ಅವರು ಬಂಧಿಸಿದ್ದಾರೆ. 

ಈ ಘಟನೆ ಸೆ.2ರ ಭಾನುವಾರ ರಾತ್ರಿ ನಡೆದಿದೆ. ಮಹಿಳೆಯು ಮನೆಯಲ್ಲಿ ನಿದ್ರಿಸಿಕೊಂಡಿದ್ದಾಗ ಆಕೆಯ ಮಗ ಆಕೆಯ ಮೇಲೆ ಮುಗಿಬಿದ್ದ. ಆತನ ವಿಕಲಾಂಗ ತಂದೆಯು ಘಟನೆಯ ವೇಳೆ ಮನೆಯಲ್ಲಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಮಗನಿಗೆ ಮದುವೆಯಾಗಿದ್ದು ಮೂವರು ಮಕ್ಕಳಿದ್ದಾರೆ. ಮಗನ ಅತ್ಯಾಚಾರವನ್ನು ತಾಯಿಯು ಪ್ರತಿರೋಧಿಸಿದಾಗ ಆಕೆಯ ಕುತ್ತಿಗೆಯನ್ನು ಕತ್ತಿಯಿಂದ ಒತ್ತಿ ಹಿಡಿದ ಮಗನು ತನ್ನ ಹೀನ ಕೃತ್ಯವನ್ನು  ಮುಗಿಸಿದ್ದಾನೆ ಎಂದು ಸೇಂಧವಾ ಪೊಲೀಸ್‌ ಠಾಣಾಧಿಕಾರಿ ದಿನೇಶ್‌ ಚೌಹಾಣ್‌ ತಿಳಿಸಿದ್ದಾರೆ.

ಕಾಮಾಂಧ ಮಗನ ಈ ನಿರ್ಲಜ್ಜ ಕೃತ್ಯವನ್ನು ಆತನ 7 ವರ್ಷ ಪ್ರಾಯದ ಪುತ್ರನು ವೀಕ್ಷಿಸಿದ್ದಾನೆ ಎಂದವರು ಹೇಳಿದರು.

ಕಾಮಾಂಧ ಮಗನ ಕೈಯಿಂದ ಹೇಗೋ ತಪ್ಪಿಸಿಕೊಂಡ ಆತನ ತಾಯಿ ಆ ನಡು ರಾತ್ರಿಯಲ್ಲೇ  ತನ್ನ ಮೂವರು ಮೊಮ್ಮಕ್ಕಳೊಂದಿಗೆ ಸಮೀಪದ ಹೊಲಕ್ಕೆ ಓಡಿ ಹೋದಳು .

ಸೋಮವಾರ (ಸೆ.3) ಆಕೆ ತನ್ನ ಮೇಲಾದ ಹೇಯ ಕೃತ್ಯವನ್ನು ಸಂಬಂಧಿಕರಿಗೆ ತಿಳಿಸಿದಾಗ ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದರು. ಪೊಲೀಸರು ಆರೋಪಿ, ಕಾಮಾಂಧ ಮಗನನ್ನು ಬಂಧಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.   

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.