2019ರಲ್ಲಿ ಗೆದ್ದು ಬಂದರೆ ರಫೇಲ್ ಮಧ್ಯವರ್ತಿಗಳಿಗೆ ಜೈಲು: ಕಾಂಗ್ರೆಸ್
Team Udayavani, Sep 5, 2018, 7:19 PM IST
ಹೊಸದಿಲ್ಲಿ : ”2019ರ ಲೋಕಸಭಾ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ರಫೇಲ್ ಫೈಟರ್ ಜೆಟ್ ವ್ಯವಹಾರದ ಎಲ್ಲ ಮಧ್ಯವರ್ತಿಗಳನ್ನು ಮತ್ತು ಫಲಾನುಭವಿಗಳನ್ನು ದಂಡನೆಗೆ ಗುರಿಪಡಿಸಿ ಜೈಲಿಗೆ ಅಟ್ಟುತ್ತೇವೆ” ಎಂದು ಕಾಂಗ್ರೆಸ್ ಇಂದು ಬುಧವಾರ ಹೇಳಿದೆ.
ಕಾನ್ಪುರದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಚತುರ್ವೇದಿ, ರಫೇಲ್ ಫೈಟರ್ ಜೆಟ್ ವಹಿವಾಟಿನಿಂದ ದೇಶಕ್ಕೆ 41,000 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಮತ್ತು ಫ್ರಾನ್ಸ್ ಸರಕಾರದ ನಡುವೆ ಏರ್ಪಟ್ಟಿರುವ ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರದ ದಾಖಲೆ ಪತ್ರಗಳನ್ನು ಸುದ್ದಿಗೋಷ್ಠಿಯಲ್ಲಿ ಮಂಡಿಸಿದ ಪ್ರಿಯಾಂಕಾ, “ಹೊಸದಾಗಿ ನಿಗದಿಯಾಗಿರುವ ದರವನ್ನು ರಫೇಲ್ ಉತ್ಪಾದಕ ಕಂಪೆನಿ ಬಹಿರಂಗಪಡಿಸಬಹುದಾದರೆ ಅದನ್ನೇ ಸಂಸತ್ತಿನಲ್ಲಿ ಬಹಿರಂಗಪಡಿಸುವುದಕ್ಕೆ ಕೇಂದ್ರಕ್ಕೇನು ಅಡ್ಡಿ’ ಎಂದು ಪ್ರಶ್ನಿಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ರಫೇಲ್ ಡೀಲ್ ಕುರಿತಾದ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರೂಪಿಸಬೇಕೆಂದು ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಡಿಸಿದ್ದ ಬೇಡಿಕೆಯನ್ನು ಕೇಂದ್ರ ಸರಕಾರ ಪುರಸ್ಕರಿಸದಿರುವುದನ್ನು ಕಾಂಗ್ರೆಸ್ ನಾಯಕಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency