2019ರಲ್ಲಿ ಗೆದ್ದು ಬಂದರೆ ರಫೇಲ್ ಮಧ್ಯವರ್ತಿಗಳಿಗೆ ಜೈಲು: ಕಾಂಗ್ರೆಸ್
Team Udayavani, Sep 5, 2018, 7:19 PM IST
ಹೊಸದಿಲ್ಲಿ : ”2019ರ ಲೋಕಸಭಾ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ರಫೇಲ್ ಫೈಟರ್ ಜೆಟ್ ವ್ಯವಹಾರದ ಎಲ್ಲ ಮಧ್ಯವರ್ತಿಗಳನ್ನು ಮತ್ತು ಫಲಾನುಭವಿಗಳನ್ನು ದಂಡನೆಗೆ ಗುರಿಪಡಿಸಿ ಜೈಲಿಗೆ ಅಟ್ಟುತ್ತೇವೆ” ಎಂದು ಕಾಂಗ್ರೆಸ್ ಇಂದು ಬುಧವಾರ ಹೇಳಿದೆ.
ಕಾನ್ಪುರದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಚತುರ್ವೇದಿ, ರಫೇಲ್ ಫೈಟರ್ ಜೆಟ್ ವಹಿವಾಟಿನಿಂದ ದೇಶಕ್ಕೆ 41,000 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಮತ್ತು ಫ್ರಾನ್ಸ್ ಸರಕಾರದ ನಡುವೆ ಏರ್ಪಟ್ಟಿರುವ ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರದ ದಾಖಲೆ ಪತ್ರಗಳನ್ನು ಸುದ್ದಿಗೋಷ್ಠಿಯಲ್ಲಿ ಮಂಡಿಸಿದ ಪ್ರಿಯಾಂಕಾ, “ಹೊಸದಾಗಿ ನಿಗದಿಯಾಗಿರುವ ದರವನ್ನು ರಫೇಲ್ ಉತ್ಪಾದಕ ಕಂಪೆನಿ ಬಹಿರಂಗಪಡಿಸಬಹುದಾದರೆ ಅದನ್ನೇ ಸಂಸತ್ತಿನಲ್ಲಿ ಬಹಿರಂಗಪಡಿಸುವುದಕ್ಕೆ ಕೇಂದ್ರಕ್ಕೇನು ಅಡ್ಡಿ’ ಎಂದು ಪ್ರಶ್ನಿಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ರಫೇಲ್ ಡೀಲ್ ಕುರಿತಾದ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರೂಪಿಸಬೇಕೆಂದು ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಡಿಸಿದ್ದ ಬೇಡಿಕೆಯನ್ನು ಕೇಂದ್ರ ಸರಕಾರ ಪುರಸ್ಕರಿಸದಿರುವುದನ್ನು ಕಾಂಗ್ರೆಸ್ ನಾಯಕಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ