2019ರಲ್ಲಿ ಗೆದ್ದು ಬಂದರೆ ರಫೇಲ್ ಮಧ್ಯವರ್ತಿಗಳಿಗೆ ಜೈಲು: ಕಾಂಗ್ರೆಸ್
Team Udayavani, Sep 5, 2018, 7:19 PM IST
ಹೊಸದಿಲ್ಲಿ : ”2019ರ ಲೋಕಸಭಾ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ರಫೇಲ್ ಫೈಟರ್ ಜೆಟ್ ವ್ಯವಹಾರದ ಎಲ್ಲ ಮಧ್ಯವರ್ತಿಗಳನ್ನು ಮತ್ತು ಫಲಾನುಭವಿಗಳನ್ನು ದಂಡನೆಗೆ ಗುರಿಪಡಿಸಿ ಜೈಲಿಗೆ ಅಟ್ಟುತ್ತೇವೆ” ಎಂದು ಕಾಂಗ್ರೆಸ್ ಇಂದು ಬುಧವಾರ ಹೇಳಿದೆ.
ಕಾನ್ಪುರದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಚತುರ್ವೇದಿ, ರಫೇಲ್ ಫೈಟರ್ ಜೆಟ್ ವಹಿವಾಟಿನಿಂದ ದೇಶಕ್ಕೆ 41,000 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಮತ್ತು ಫ್ರಾನ್ಸ್ ಸರಕಾರದ ನಡುವೆ ಏರ್ಪಟ್ಟಿರುವ ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರದ ದಾಖಲೆ ಪತ್ರಗಳನ್ನು ಸುದ್ದಿಗೋಷ್ಠಿಯಲ್ಲಿ ಮಂಡಿಸಿದ ಪ್ರಿಯಾಂಕಾ, “ಹೊಸದಾಗಿ ನಿಗದಿಯಾಗಿರುವ ದರವನ್ನು ರಫೇಲ್ ಉತ್ಪಾದಕ ಕಂಪೆನಿ ಬಹಿರಂಗಪಡಿಸಬಹುದಾದರೆ ಅದನ್ನೇ ಸಂಸತ್ತಿನಲ್ಲಿ ಬಹಿರಂಗಪಡಿಸುವುದಕ್ಕೆ ಕೇಂದ್ರಕ್ಕೇನು ಅಡ್ಡಿ’ ಎಂದು ಪ್ರಶ್ನಿಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ರಫೇಲ್ ಡೀಲ್ ಕುರಿತಾದ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರೂಪಿಸಬೇಕೆಂದು ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಡಿಸಿದ್ದ ಬೇಡಿಕೆಯನ್ನು ಕೇಂದ್ರ ಸರಕಾರ ಪುರಸ್ಕರಿಸದಿರುವುದನ್ನು ಕಾಂಗ್ರೆಸ್ ನಾಯಕಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ