ನಕ್ಸಲರ ನಂಟಿಂದಲೇ ಬಂಧನ
Team Udayavani, Sep 6, 2018, 6:00 AM IST
ನವದೆಹಲಿ: ನಕ್ಸಲರ ಜೊತೆಗಿನ ನಂಟಿನ ಕುರಿತಂತೆ “ಪ್ರಬಲ ಪುರಾವೆ’ ಇದ್ದುದರಿಂದಲೇ ಆರು ಮಂದಿ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಯಿತು ಎಂದು ಮಹಾರಾಷ್ಟ್ರ ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.
ಭೀಮಾ- ಕೊರೆಂಗಾವ್ ಹಿಂಸಾಚಾರ ಮತ್ತು ದೇಶಾದ್ಯಂತ ಗಲಭೆ ಸೃಷ್ಟಿಸುವ ಉದ್ದೇಶವಿದ್ದುದರಿಂದಲೇ ಆ.29 ರಂದು ಕ್ರಾಂತಿಕಾರಿ ಕವಿ ವರವರರಾವ್, ವರ್ನೆನ್ ಗೋನ್ಸಾಲ್ವೆಸ್, ಅರುಣ್ ಫೆರೈರಾ, ಸುಧಾ ಭಾರದ್ವಾಜ್, ಗೌತಮ್ ನವೆಕಾ ಅವರನ್ನು ಬಂಧಿಸಲಾಗಿತ್ತು ಎಂದು ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ. ಇವರೆಲ್ಲರೂ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದರು ಎಂಬ ಕಾರಣದಿಂದ ಬಂಧಿಸಲಾಗಿಲ್ಲ ಎಂದೂ ಅವರು ಅಫಿಡವಿಟ್ನಲ್ಲಿ ಸ್ಪಷ್ಟವಾಗಿ ಉಲ್ಲೇಖೀಸಿದ್ದಾರೆ. ಇದೇ ವೇಳೆ ಸದ್ಯ ಗೃಹ ಬಂಧನದಲ್ಲಿರುವ ಐವರು ಹೋರಾಟಗಾರರ ಗೃಹ ಬಂಧನ ಗುರುವಾರಕ್ಕೆ ಮುಕ್ತಾಯವಾಗಲಿದೆ. ಈ ಆರು ಮಂದಿ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿದ್ದೇ ತಪ್ಪು ಎಂಬ ಇತಿಹಾಸ ತಜ್ಞೆ ರೋಮಿಳಾ ಥಾಪರ್ ಅವರು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಗೆ ಪ್ರತಿಯಾಗಿ ಮಹಾರಾಷ್ಟ್ರ ಪೊಲೀಸರು ಈ ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ