ಕ್ರೂರವಾಗಿ ರೇಪ್‌ ಮಾಡಿ, ಕಣ್ಣುಗಳನ್ನು ಕಿತ್ತು ತೆಗೆದರು


Team Udayavani, Sep 6, 2018, 6:00 AM IST

23.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಥುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಂದ ಘಟನೆಗಿಂತ ಭೀಕರ, ಹೀನ ಕೃತ್ಯ ಬೆಳಕಿಗೆ ಬಂದಿದೆ. ಕಣಿವೆ ರಾಜ್ಯದ ಉರಿಯಿಂದ ಆ.23ರಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಸೆ.2ರಂದು ಬಾರಾಮುಲ್ಲಾ ಜಿಲ್ಲೆಯ ಕಾಡಿನಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ಎಸಗಲಾಗಿರುವ ಕ್ರೂರತೆಯ ಪರಾಕಾಷ್ಠೆ ಹೇಗಿದೆ ಎಂದರೆ ಚೂರಿಯಿಂದ ಕಣ್ಣುಗಳನ್ನು ಕಿತ್ತು ತೆಗೆಯಲಾಗಿದೆ. ಆಕೆಯ ದೇಹದ ಖಾಸಗಿ ಭಾಗಕ್ಕೆ ಆ್ಯಸಿಡ್‌ ಹಾಕಿ ಕ್ರೌರ್ಯ ಮೆರೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ ತಾಯಿ, ಮಲ ಸಹೋದರ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಹೇಯ ಕೃತ್ಯದ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.

ಅವರನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅಸುನೀಗಿದ ಬಾಲಕಿಯ ತಾಯಿಗೆ ಪತಿಯ 2ನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಸೇಡು ಇತ್ತು. ಹೀಗಾಗಿ ಬಾಲಕಿಯನ್ನು ಮುಗಿಸುವ ಯೋಚನೆ ರೂಪಿಸಲಾಗಿತ್ತು. ಅದರಂತೆ 14 ವರ್ಷದ ಮಲ ಸಹೋದರನೇ ಕರುಣೆಯಿಲ್ಲದೆ ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿದ್ದ. ಈ ಸಂದರ್ಭದಲ್ಲಿ ಮಲ ತಾಯಿಯೇ ಖುದ್ದು ವೀಕ್ಷಿಸುತ್ತಿದ್ದಳು ಎಂಬ ವಿಚಾರ ಬಹಿರಂಗವಾಗಿದೆ. ಅತ್ಯಂತ ಆಘಾತಕಾರಿ ವಿಚಾರವೆಂದರೆ ಮಲ ತಾಯಿಯೇ ಕೊನೆಯಲ್ಲಿ ಕತ್ತು ಹಿಸುಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾಳೆ. ಉಳಿದವರು ಆ್ಯಸಿಡ್‌ ಅನ್ನು ಬಾಲಕಿಯ ದೇಹದ ಖಾಸಗಿ ಭಾಗ, ಇತರ ಅಂಗಾಗಗಳಿಗೆ ಆ್ಯಸಿಡ್‌ ಎರಚಿದ್ದಾರೆ ಎಂದು ಬಾರಾಮುಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಮಿ¤ಯಾಜ್‌ ಹುಸೇನ್‌ ಮಿರ್‌ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಚೂರಿ, ಆ್ಯಸಿಡ್‌ ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಥುವಾ ಅತ್ಯಾಚಾರಕ್ಕೆ ಗಲಾಟೆ ಎಬ್ಬಿಸಿದ ರಾಜಕೀಯ ಪಕ್ಷಗಳು ಅದಕ್ಕಿಂತ ಭೀಕರ ಹೇಯ ಕೃತ್ಯಕ್ಕೆ ಮೌನವಾಗಿಯೇ ಉಳಿದಿವೆ.

ಸೇಡು ಪ್ರಮುಖ ಕಾರಣ
ಅಸುನೀಗಿದ ಬಾಲಕಿ ಮತ್ತೂಬ್ಬ ಪತ್ನಿಯ ಪುತ್ರಿಯಾಗಿದ್ದಾಳೆ. ಪತಿ ಅವಳ ಜತೆಗೆ ಹೆಚ್ಚು ಕಾಲ ಕಳೆಯುತ್ತಾರೆ. ಅದರಿಂದ ರೊಚ್ಚಿಗೆದ್ದು ಈ ಕೃತ್ಯವೆಸಗಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಇಮ್ತಿಯಾಜ್‌ ಹುಸೇನ್‌ ಹೇಳಿದ್ದಾರೆ. ಬಾಲಕಿಯ ಮತ್ತೂಬ್ಬ ಪತ್ನಿ ಜಾರ್ಖಂಡ್‌ ಮೂಲದವರಾಗಿದ್ದಾರೆ. ಮನೆಯಿಂದ ಒಂದು ಕಿಮೀ ದೂರದಲ್ಲಿರುವ ಸ್ಥಳದಲ್ಲಿ ಅಸುನೀಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಸ್ನೇಹಿತರೊಂದಿಗೆ ಅತ್ಯಾಚಾರ ಎಸಗಿದ ಬಳಿಕ ಶವವನ್ನು ಸೊಪ್ಪು ಮತ್ತಿತರ ವಸ್ತುಗಳಿಂದ ಮುಚ್ಚಲಾಗಿತ್ತು. 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.