ತಮಿಳ್ನಾಡು ಆರೋಗ್ಯ ಸಚಿವರ ಮೇಲೆಯೇ “ಗುಟ್ಕಾ’ ದಾಳಿ
Team Udayavani, Sep 6, 2018, 6:00 AM IST
ಹೊಸದಿಲ್ಲಿ/ಚೆನ್ನೈ: ಗುಟ್ಕಾ ಕಂಪೆನಿಗಳ ತೆರಿಗೆ ವಂಚನೆ ಪ್ರಕರಣ ಸಂಬಂಧ ಕರ್ನಾಟಕದ ಐದು ಸ್ಥಳಗಳು ಮತ್ತು ತಮಿಳುನಾಡಿನ 35 ಸ್ಥಳಗಳಲ್ಲಿ ಸಿಬಿಐ ಬುಧವಾರ ದಾಳಿ ನಡೆಸಿದೆ. 2017ರ ಜುಲೈಯಲ್ಲಿ ತಮಿಳುನಾಡಿ ನಲ್ಲಿ ಬಹಿರಂಗವಾದ 250 ಕೋಟಿ ರೂ. ಗುಟ್ಕಾ ಕಂಪೆನಿಗಳ ತೆರಿಗೆ ವಂಚನೆ ಪ್ರಕರಣ ಸಂಬಂಧ ತಮಿಳುನಾಡಿನ ಆರೋಗ್ಯ ಸಚಿವ ಸಿ. ವಿಜಯಭಾಸ್ಕರ್, ಪೊಲೀಸ್ ಮಹಾ ನಿರ್ದೇಶಕ ಟಿ.ಕೆ. ರಾಜೇಂದ್ರನ್, ಚೆನ್ನೈಯ ನಿವೃತ್ತ ಪೊಲೀಸ್ ಆಯುಕ್ತ ಎಸ್. ಜಾರ್ಜ್, ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಇದೇ ಮೊದಲ ಬಾರಿಗೆ ತಮಿಳು ನಾಡಿನಲ್ಲಿ ಡಿಜಿಪಿ ನಿವಾಸದ ಮೇಲೆಯೂ ದಾಳಿ ನಡೆದಿದೆ. ಜತೆಗೆ ಅದೇ ರಾಜ್ಯದ ಸಚಿವರೊಬ್ಬರು ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳ ತನಿಖೆಗೆ ಗುರಿಯಾಗಿದ್ದಾರೆ.
2017ರ ಜುಲೈಯಲ್ಲಿ ಬೆಳಕಿಗೆ ಬಂದ ಗುಟ್ಕಾ ಕಂಪೆನಿಗಳ 250 ಕೋಟಿ ರೂ. ಮೌಲ್ಯದ ತೆರಿಗೆ ವಂಚನೆ ಪ್ರಕರಣ ಸಂಬಂಧ ದಾಳಿ ನಡೆಸಿ ಹಲವು ದಾಖಲೆಗಳು, ಡೈರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವುಗಳಲ್ಲಿ ತಮಿಳುನಾಡು ಆರೋಗ್ಯ ಸಚಿವರಿಗೆ 40 ಕೋಟಿ ರೂ. ನೀಡಲಾಗಿತ್ತು ಎಂಬ ಅಂಶ ಪ್ರಸ್ತಾವವಾಗಿತ್ತು. ಜತೆಗೆ ಡಿಜಿಪಿ ಹೆಸರೂ ಕೇಳಿಬಂದಿತ್ತು. ಆದಾಯ ತೆರಿಗೆ ಇಲಾಖೆಯ ಪ್ರಧಾನ ನಿರ್ದೇಶಕರು ತಮಿಳುನಾಡು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್