ಪಾಕ್ ಭೀತಿವಾದ ನಿಲ್ಲಿಸಿದರೆ ನಾವೂ ನೀರಜ್ ಚೋಪ್ರಾ ಆಗುವೆವು: ರಾವತ್
Team Udayavani, Sep 6, 2018, 11:34 AM IST
ಹೊಸದಿಲ್ಲಿ : ಪಾಕಿಸ್ಥಾನ ಭಯೋತ್ಪಾದನೆಯನ್ನು ನಿಲ್ಲಿಸಿದರೆ ನಾವು ಕೂಡ ನೀರಜ್ ಚೋಪ್ರಾ ಆಗುವೆವು ಎಂದು ಭಾರತೀಯ ಸೇನಾ ಪಡೆ ಮುಖ್ಯಸ್ಥ ಬಿಪಿನ್ರಾವತ್ ಹೇಳಿದ್ದಾರೆ.
ವಿಶ್ವ ಸಮುದಾಯದಿಂದ ಪ್ರತ್ಯೇಕಗೊಂಡು ಏಕಾಕಿಯಾಗಿ, ಆರ್ಥಿಕವಾಗಿ ದಿವಾಳಿ ಎದ್ದಿರುವ ಪಾಕಿಸ್ಥಾನಕ್ಕೆ ತನ್ನ ಈ ದಯನೀಯ ಸ್ಥಿತಿಯಿಂದ ಮೇಲೆ ಬರಲು ಭಾರತದ ಸಹಾಯ ಹಸ್ತ ಬೇಕಾಗಿದೆ ಎಂದು ಅಂತಾರಾಷ್ಟ್ರೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಿರುವ ಇಂದಿನ ಸಂದರ್ಭದಲ್ಲಿ ರಾವತ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಭಾರತ – ಪಾಕ್ ಗಡಿಯಲ್ಲಿ ನೀವು ಕ್ರೀಡಾ ಮನೋಭಾವವನ್ನು ತೋರುವಿರಾ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸುತ್ತಿದ್ದ ಜನರಲ್ ರಾವತ್ ಅವರು, ‘ಪಾಕಿಸ್ಥಾನ ಒಂದೊಮ್ಮೆ ಭಯೋತ್ಪಾದನೆಯನ್ನು ನಿಲ್ಲಿಸಿದರೆ ನಾವು ಕೂಡ ನೀರಜ್ ಚೋಪ್ರಾ ಆಗುವೆವು’ ಎಂದು ಮಾರ್ಮಿಕವಾಗಿ ಹೇಳಿದರು.
ಏಶ್ಯನ್ ಗೇಮ್ಸ್ ಜವೆಲನ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ತನ್ನ ಪಾಕ್ ಪ್ರತಿಸ್ಪರ್ಧಿ ವಿರುದ್ಧ ಸದ್ಭಾವನೆ ತೋರುವ ಮೂಲಕ ಉಭಯ ದೇಶಗಳ ಅಭಿಮಾನಿಗಳನ್ನು ಗೆದ್ದಿದ್ದರು.
‘ಭಯೋತ್ಪಾದನೆಯನ್ನು ನಿಲ್ಲಿಸುವ ಮೂಲಕ ಪಾಕಿಸ್ಥಾನ ಮೊದಲ ಹೆಜ್ಜೆಯನ್ನು ಇಡಬೇಕು; ಆಗ ನಾವು ಕೂಡ ನೀರಜ್ ಚೋಪ್ರಾ ಅವರಂತೆ ಮುಂದಡಿ ಇಡುವೆವು’ ಎಂದು ರಾವತ್ ಹೇಳಿದರು.
ಏಶ್ಯನ್ ಗೇಮ್ಸ್ ಪದಕ ವಿಜೇತರನ್ನು ಸೇನೆಯ ವತಿಯಿಂದ ಸಮ್ಮಾನಿಸುವ ಕಾರ್ಯಕ್ರಮದಲ್ಲಿ ಜನರಲ್ ರಾವತ್ ಮಾತನಾಡುತ್ತಿದ್ದರು. ಜವೆಲಿನ್ ಕಂಚು ಗೆದ್ದಿದ್ದ ಪಾಕಿಸ್ಥಾನದ ಅರ್ಷದ್ ನದೀಮ್ ಅವರನ್ನು ನೀರಜ್ ಚೋಪ್ರಾ ಕೈಕುಲುಕಿ ಅಭಿನಂದಿಸಿದ್ದರು. ಆ ಸನ್ನಿವೇಶದ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್