ಇಸ್ರೋದಿಂದ ಸಣ್ಣ ಉಡಾವಣಾ ವಾಹಕ ಅಭಿವೃದ್ಧಿ


Team Udayavani, Sep 7, 2018, 6:00 AM IST

37.jpg

ಹೊಸದಿಲ್ಲಿ: ಕಡಿಮೆ ತೂಕದ ಸ್ಯಾಟಲೈಟ್‌ಗಳನ್ನು ಉಡಾವಣೆ ಮಾಡುವುದಕ್ಕಾಗಿ ಸಣ್ಣ ಉಡಾಹಕಗಳನ್ನು ಅಭಿವೃದ್ಧಿಪಡಿಸುತ್ತಿರುವುದಾಗಿ ಇಸ್ರೋ ಮುಖ್ಯಸ್ಥ ಕೆ. ಶಿವನ್‌ ಹೇಳಿದ್ದಾರೆ. ಬೆಂಗಳೂರಿನ ಸ್ಪೇಸ್‌ ಎಕ್ಸ್‌ಪೋ 2018ರಲ್ಲಿ ಮಾತನಾಡಿದ ಅವರು, 500 ರಿಂದ 700 ಕಿಲೋ ತೂಕದ ಸಣ್ಣ ಸ್ಯಾಟಲೈಟ್‌ಗಳನ್ನು ಭೂಮಿಯಿಂದ 500 ಕಿ.ಮೀ ದೂರದವರೆಗೆ ಕಳುಹಿಸಲು ಸಣ್ಣ ಉಡಾಹಕಗಳ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಸ್ಟಾರ್ಟಪ್‌ಗ್ಳಿಗೆ ಬೆಂಬಲ ನೀಡುವ ಉದ್ದೇಶದಿಂದ ಆರು ಸ್ಥಳಗಳಲ್ಲಿ ಇನ್‌ಕುಬೇಶನ್‌ ಸೆಂಟರ್‌ಗಳನ್ನೂ ಇಸ್ರೋ ಸ್ಥಾಪಿಸಲಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮವು ಎರಡು ಪ್ರಮುಖ ಆಧಾರ ಸ್ತಂಭಗಳಾಗಿದ್ದು, ಇಸ್ರೋದ ಹೊರೆಯನ್ನು ಕಡಿಮೆ ಮಾಡಲು ಉದ್ಯಮ ನೆರವಾಗಬೇಕಿದೆ ಎಂದಿದ್ದಾರೆ. ಸಣ್ಣ ಸ್ಯಾಟಲೈಟ್‌ಗಳಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂವಹನ ಉದ್ದೇಶಕ್ಕೆ ಸಣ್ಣ ಸ್ಯಾಟಲೈಟ್‌ಗಳನ್ನು ಬಳಸಲಾಗುತ್ತಿದೆ. ಈ ಮಾರುಕಟ್ಟೆಗೆ ಪೂರಕವಾಗಿ, ಸಣ್ಣ ಸ್ಯಾಟಲೈಟ್‌ ಉಡಾವಣಾ ವಾಹಕಗಳನ್ನು ಇಸ್ರೋ ಅಭಿವೃದ್ಧಿಪಡಿಸುತ್ತಿದೆ ಎಂದು ಸಿವನ್‌ ಹೇಳಿದ್ದಾರೆ.

ಸಾಮಾನ್ಯವಾಗಿ ಇವು ಸರಳ ತಂತ್ರಜ್ಞಾನವನ್ನು ಬಳಸುತ್ತವೆ. ಪ್ರತಿ ವರ್ಷ ಈ ರೀತಿಯ 50-60 ಉಡಾಹಕಗಳ ಅಗತ್ಯ ಇರುತ್ತವೆ. ಇಸ್ರೋ ಮುಂದಿನ 3-4 ವರ್ಷಗಳಲ್ಲಿ ಗಗನಯಾನದ ಮೇಲೆ ಹೆಚ್ಚು ಗಮನ ಹರಿಸುವುದರಿಂದ, ಖಾಸಗಿಯವರು ಈ ನಿಟ್ಟಿನಲ್ಲಿ ಹೆಚ್ಚು ಶ್ರಮಿಸಿದರೆ ಇಸ್ರೋ ಹೊರೆ ಕಡಿಮೆಯಾಗುತ್ತದೆ. ಈ ಸಣ್ಣ ಉಡಾಹಕಗಳನ್ನು ನಿರ್ಮಿಸುವಲ್ಲಿ ಸಮಯ ವ್ಯರ್ಥ ಮಾಡದೇ,ಖಾಸಗಿಯವರಿಗೆ ಇದರ ಜವಾಬ್ದಾರಿಯನ್ನು ವಹಿಸಲು ಬಯಸಿದ್ದೇವೆ.

ಗಗನಯಾನಕ್ಕೆ ಫ್ರಾನ್ಸ್‌ ಸಹಭಾಗಿತ್ವ: ಇಸ್ರೋದ ಮಾನವ ಸಹಿತ ಗಗನಯಾನಕ್ಕೆ ಭಾರತ ಹಾಗೂ ಫ್ರಾನ್ಸ್‌ ಕೈಜೋಡಿಸಿವೆ. ಈ ಬಗ್ಗೆ ಬೆಂಗಳೂರು ಸ್ಪೇಸ್‌ ಎಕ್ಸ್‌ಪೋದಲ್ಲಿ ಫ್ರಾನ್ಸ್‌ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷ ಜಿಯಾನ್‌ ಯೆಸ್‌ ಲೆ ಗಾಲ್‌ ಘೋಷಣೆ ಮಾಡಿದ್ದಾರೆ. ಬಾಹ್ಯಾಕಾಶದಲ್ಲಿ ಆರೋಗ್ಯ, ಗಗನಯಾನಿಗಳ ಆರೋಗ್ಯ ಮೇಲ್ವಿಚಾರಣೆ, ಲೈಫ್ ಸಪೋರ್ಟ್‌, ರೇಡಿಯೇಶನ್‌ ವಿರುದ್ಧ ರಕ್ಷಣೆ ಸೇರಿದಂತೆ ಹಲವು ವಿಷಯಗಳಲ್ಲಿ ಫ್ರಾನ್ಸ್‌ನ ಸಿಎನ್‌ಇಎಸ್‌ ಸಹಕಾರ ನೀಡಲಿದೆ. ಉಭಯ ದೇಶಗಳ ಬಾಹ್ಯಾಕಾಶ ಸಂಸ್ಥೆಗಳು ಮಂಗಳ, ಶುಕ್ರ ಹಾಗೂ ಕ್ಷುದ್ರಕಾಯಗಳ ಅಧ್ಯಯನದಲ್ಲೂ ಒಟ್ಟಾಗಿ ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿವೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.