14 ದಿನ ಉಪವಾಸದ ಬಳಿಕ ಹಾರ್ದಿಕ್ ಪಟೇಲ್ ಆಸ್ಪತ್ರೆಗೆ ದಾಖಲು
Team Udayavani, Sep 7, 2018, 4:10 PM IST
ಅಹ್ಮದಾಬಾದ್ : ಪಾಟಿದಾರ್ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರಿಂದು ಆಸ್ಪತ್ರೆಗೆ ದಾಖಲಾಗುವುದಕ್ಕೆ ಒಪ್ಪಿಗೆ ನೀಡಿದರೆಂದು ಅವರ ನಿಕಟವರ್ತಿ ತಿಳಿಸಿದ್ದಾರೆ.
ಕಳೆದ 14 ದಿನಗಳ ನಿರಶನದಿಂದ ತೀರ ಕೃಶರಾಗಿರುವ ಹಾರ್ದಿಕ್ ಪಟೇಲ್ ಅವರ ಪ್ರಧಾನ ಅಂಗಾಂಗಳ ಕಾರ್ಯ ಕ್ಷಮತೆಯಲ್ಲಿ ಕಳವಳಕಾರಿ ವ್ಯತ್ಯಯ ತೋರಿಬಂದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸುವುದಕ್ಕೆ ಮನವೊಲಿಸಲಾಯಿತು. ಅದಕ್ಕೆ ಅವರು ಒಪ್ಪಿದ ಕಾರಣ ಅಂತೆಯೇ ಮಾಡಲಾಯಿತು ಎಂದು ನಿಕಟವರ್ತಿ ತಿಳಿಸಿದ್ದಾರೆ.
ನಿನ್ನೆ ಗುರುವಾರವಷ್ಟೇ ಹಾರ್ದಿಕ್ ತಾನಿನ್ನು ನೀರು ಸೇವಿಸುವುದನ್ನು ಕೂಡ ನಿಲ್ಲಿಸುವೆ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅವರ ತುರ್ತು ಚಿಕಿತ್ಸೆಗಾಗಿ ಸಕಲ ಸೌಕರ್ಯಗಳ ಅಂಬುಲೆನ್ಸ್ ಅನ್ನು ಸರಕಾರದ ಆದೇಶದ ಪ್ರಕಾರ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್