14 ದಿನ ಉಪವಾಸದ ಬಳಿಕ ಹಾರ್ದಿಕ್ ಪಟೇಲ್ ಆಸ್ಪತ್ರೆಗೆ ದಾಖಲು
Team Udayavani, Sep 7, 2018, 4:10 PM IST
ಅಹ್ಮದಾಬಾದ್ : ಪಾಟಿದಾರ್ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರಿಂದು ಆಸ್ಪತ್ರೆಗೆ ದಾಖಲಾಗುವುದಕ್ಕೆ ಒಪ್ಪಿಗೆ ನೀಡಿದರೆಂದು ಅವರ ನಿಕಟವರ್ತಿ ತಿಳಿಸಿದ್ದಾರೆ.
ಕಳೆದ 14 ದಿನಗಳ ನಿರಶನದಿಂದ ತೀರ ಕೃಶರಾಗಿರುವ ಹಾರ್ದಿಕ್ ಪಟೇಲ್ ಅವರ ಪ್ರಧಾನ ಅಂಗಾಂಗಳ ಕಾರ್ಯ ಕ್ಷಮತೆಯಲ್ಲಿ ಕಳವಳಕಾರಿ ವ್ಯತ್ಯಯ ತೋರಿಬಂದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸುವುದಕ್ಕೆ ಮನವೊಲಿಸಲಾಯಿತು. ಅದಕ್ಕೆ ಅವರು ಒಪ್ಪಿದ ಕಾರಣ ಅಂತೆಯೇ ಮಾಡಲಾಯಿತು ಎಂದು ನಿಕಟವರ್ತಿ ತಿಳಿಸಿದ್ದಾರೆ.
ನಿನ್ನೆ ಗುರುವಾರವಷ್ಟೇ ಹಾರ್ದಿಕ್ ತಾನಿನ್ನು ನೀರು ಸೇವಿಸುವುದನ್ನು ಕೂಡ ನಿಲ್ಲಿಸುವೆ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅವರ ತುರ್ತು ಚಿಕಿತ್ಸೆಗಾಗಿ ಸಕಲ ಸೌಕರ್ಯಗಳ ಅಂಬುಲೆನ್ಸ್ ಅನ್ನು ಸರಕಾರದ ಆದೇಶದ ಪ್ರಕಾರ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು