ಎನ್ಪಿಎಗೆ ನೀತಿಗ್ರಹಣ ಕಾರಣ
Team Udayavani, Sep 11, 2018, 7:20 AM IST
ಹೊಸದಿಲ್ಲಿ: ದೇಶದಲ್ಲಿ ಅನುತ್ಪಾದಕ ಆಸ್ತಿ ಪ್ರಮಾಣ ಹೆಚ್ಚಾಗಲು ಬ್ಯಾಂಕಿಂಗ್ ಕ್ಷೇತ್ರದ ಅತಿಯಾದ ಆತ್ಮವಿಶ್ವಾಸ ಹಾಗೂ ನೀತಿ ಗ್ರಹಣವೇ ಕಾರಣ ಎಂದು ಆರ್ಬಿಐ ಮಾಜಿ ಗವರ್ನರ್ ಡಾ.ರಘುರಾಂ ರಾಜನ್ ಹೇಳಿದ್ದಾರೆ. ಬಿಜೆಪಿ ಸಂಸದ ಡಾ.ಮುರಳಿ ಮನೋಹರ ಜೋಶಿ ನೇತೃತ್ವದ ಸಂಸತ್ನ ಅಂದಾಜು ಸಮಿತಿಗೆ ಅವರು ಪತ್ರದ ಮೂಲಕ ಈ ವಿವರಣೆ ನೀಡಿದ್ದಾರೆ.
ಬ್ಯಾಂಕುಗಳು ಸರಿಯಾಗಿ ಪರಿಶೀಲನೆ ನಡೆಸದೇ ದೊಡ್ಡ ಮೊತ್ತದ ಸಾಲವನ್ನು ನೀಡಿದವು. ಕೆಲವೊಂದು ಸಾಲಗಳು ಎನ್ಪಿಎ ಆಗಿ ಬದಲಾಗುವುದು ಬೇಡ ಎಂಬ ಉದ್ದೇಶದಿಂದ ಮತ್ತಷ್ಟು ಸಾಲ ಮಂಜೂರು ಮಾಡಿದವು. ಜೊತೆಗೆ, 2008ರ ಆರ್ಥಿಕ ಕುಸಿತದ ಬಳಿಕ ಬ್ಯಾಂಕುಗಳ ಪ್ರಗತಿಯ ನಿರೀಕ್ಷೆಯೂ ಸುಳ್ಳಾಯಿತು. ಒಟ್ಟಿನಲ್ಲಿ ಬ್ಯಾಂಕರ್ಗಳ ಅತಿಯಾದ ಆತ್ಮವಿಶ್ವಾಸವೇ ಮುಳುವಾಯಿತು ಎಂದು ರಾಜನ್ ತಿಳಿಸಿದ್ದಾರೆ.
ನೀತಿಗ್ರಹಣ: ಇದಷ್ಟೇ ಅಲ್ಲದೆ, ಯುಪಿಎ ಅವಧಿಯಲ್ಲಿ ಆಗಿರುವಂಥ ಹಗರಣಗಳು ಹಾಗೂ ನೀತಿ ಗ್ರಹಣವೂ ಎನ್ಪಿಎ ಹೆಚ್ಚಳಕ್ಕೆ ಮತ್ತೂಂದು ಕಾರಣ ಎಂದಿದ್ದಾರೆ ರಾಜನ್. ಅನುತ್ಪಾದಕ ಆಸ್ತಿ ವಿಚಾರ ಹೊರಬಿದ್ದ ಸಂದರ್ಭದಲ್ಲೇ ಕೆಲವೊಂದು ಹಗರಣಗಳಿಂದಾಗಿ ಸರಕಾರದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ವಿಳಂಬವಾಯಿತು. ಇದು ಹಲವು ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು. ಪರೋಕ್ಷವಾಗಿ ಇದು ಲಾಭದಾಯಕತ್ವವನ್ನು ಕಡಿಮೆ ಮಾಡಿ, ಮರುಪಾವತಿಯಾಗದ ಸಾಲದ ಪ್ರಮಾಣವನ್ನು ಹೆಚ್ಚಿಸಿತು ಎಂದೂ ರಾಜನ್ ಹೇಳಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!