ಜ.8, 9: ಭಾರತ ಬಂದ್‌ ಕರಾವಳಿಯಲ್ಲೂ  ಪರಿಣಾಮ ಸಾಧ್ಯತೆ


Team Udayavani, Jan 7, 2019, 5:27 AM IST

bund.jpg

ಮಂಗಳೂರು/ಉಡುಪಿ: ಹೊಸ ವರ್ಷದ ಆರಂಭದಲ್ಲಿಯೇ ಜನತೆಗೆ ಬಂದ್‌ ಬಿಸಿ ಮುಟ್ಟಲಿದೆ. ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಮತ್ತು 9ರಂದು ಕರೆ ನೀಡಿರುವ ಭಾರತ ಬಂದ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಪರಿಣಾಮ ಬೀರುವ ಸಾಧ್ಯತೆ ಇದೆ.

ದ.ಕ. ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಬಹುತೇಕ ವಿರಳವಾಗಿರುವ ಸಾಧ್ಯತೆಯಿದೆ. ಅಸಂಘಟಿತ ಸಾರಿಗೆ ಕಾರ್ಮಿಕ ಸಂಘಟನೆ ಈಗಾಗಲೇ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಸಿಟಿ ಬಸ್‌ಗಳು ಮತ್ತು ಇತರ ಪ್ರದೇಶಗಳಿಗೆ ತೆರಳುವ ಖಾಸಗಿ ಬಸ್‌ ಮಾಲಕರು ಸೋಮವಾರ ಸಭೆ ನಡೆಸಿ ನಿರ್ಧಾರಕ್ಕೆ ಬರಲಿದ್ದಾರೆ. 

ದ.ಕ. ಬೀದಿಬದಿ ವ್ಯಾಪಾರಸ್ಥರ ಸಂಘವು ಬಂದ್‌ಗೆ ಬೆಂಬಲ ಸೂಚಿಸಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆಯ ಸಮರ್ಪಕ ಜಾರಿ ಮಾಡಬೇಕು. ಮೋದಿ ಸರಕಾರದ ಅವಧಿಯಲ್ಲಿ ಬೀದಿಬದಿ ವ್ಯಾಪಾರಿ ಗಳಿಗೆ ಯಾವುದೇ ಯೋಜನೆಗಳನ್ನು ರೂಪಿಸದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್‌ ಪೂಜಾರಿ ತಿಳಿಸಿದ್ದಾರೆ. ಸಾರ್ವತ್ರಿಕ ಮುಷ್ಕರವನ್ನು ಪಿಂಚಣಿ ದಾರರ ಸಂಘ ಬೆಂಬಲಿಸುತ್ತದೆ ಹಾಗೂ ಪಿಂಚಣಿದಾರರಿಗೆ ಮಾಸಿಕ ಪಿಂಚಣಿ 6,000 ರೂ. ಹಾಗೂ ಇದಕ್ಕೆ ತುಟ್ಟಿಭತ್ತೆಯನ್ನು ಸೇರಿಸಬೇಕೆಂದು ಒತ್ತಾಯಿಸುತ್ತದೆ ಎಂದು ಉಡುಪಿ ಪಿಂಚಣಿದಾರರ ಸಂಘ ತಿಳಿಸಿದೆ.

ಬಹುತೇಕ ಸಂದರ್ಭ ಬಂದ್‌ಗೆ ಕರೆ ನೀಡದೆ ಇರುವ ಸಂಘಟನೆಗಳೂ ಆ ದಿನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಣಯ ತಾಳುವುದಿರುತ್ತದೆ. ಹೀಗಾದರೆ ಉಡುಪಿ ಜಿಲ್ಲೆಯಲ್ಲಿಯೂ ಟ್ಯಾಕ್ಸಿ, ರಿಕ್ಷಾ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬ್ಯಾಂಕ್‌ ನೌಕರರ ಸಂಘಟನೆಗಳೂ ಬಂದ್‌ಗೆ ಬೆಂಬಲ ನೀಡಿರುವ ಕಾರಣ ಬ್ಯಾಂಕ್‌ ವ್ಯವಹಾರಗಳೂ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.  

ಜಿಲ್ಲಾ ರಿಕ್ಷಾ ಚಾಲಕರ ಸಂಘ, ಸಿಪಿಐ (ಎಂ), ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್ವಾದಿ), ಸಿಪಿಐ ಬೆಂಬಲ ಸೂಚಿಸಿವೆ. ಮೋಟಾರ್‌ ಟ್ರಾನ್ಸ್‌ಪೊರ್ಟ್‌ ಆ್ಯಂಡ್‌ ಎಂಜಿನಿಯರಿಂಗ್‌ ವರ್ಕರ್ಸ್‌ ಯೂನಿಯನ್‌ ಬೆಂಬಲಿತ ಕಾರ್ಮಿಕ ಸಂಘಟನೆ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘದ (ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ರಾಜ್ಯ ಪಿಂಚಣಿದಾರರ ಸಂಘದ, ಅಖೀಲ ಭಾರತ ಬೀಡಿ ಫೆಡರೇಶನ್‌ (ಸಿಐಟಿಯು) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. 

ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಆ ದಿನದ ಪರಿಸ್ಥಿತಿಯನ್ನು ಅವಲೋಕಿಸಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬಸ್‌ ಸಂಚಾರ ಕಾರ್ಯಾಚರಿಸಲಾಗುವುದು.
 ದೀಪಕ್‌ ಕುಮಾರ್‌, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗಾಧಿಕಾರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.