ಜ.8, 9: ಭಾರತ ಬಂದ್ ಕರಾವಳಿಯಲ್ಲೂ ಪರಿಣಾಮ ಸಾಧ್ಯತೆ
Team Udayavani, Jan 7, 2019, 5:27 AM IST
ಮಂಗಳೂರು/ಉಡುಪಿ: ಹೊಸ ವರ್ಷದ ಆರಂಭದಲ್ಲಿಯೇ ಜನತೆಗೆ ಬಂದ್ ಬಿಸಿ ಮುಟ್ಟಲಿದೆ. ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಮತ್ತು 9ರಂದು ಕರೆ ನೀಡಿರುವ ಭಾರತ ಬಂದ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಪರಿಣಾಮ ಬೀರುವ ಸಾಧ್ಯತೆ ಇದೆ.
ದ.ಕ. ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕೆಎಸ್ಸಾರ್ಟಿಸಿ ಬಸ್ ಸಂಚಾರ ಬಹುತೇಕ ವಿರಳವಾಗಿರುವ ಸಾಧ್ಯತೆಯಿದೆ. ಅಸಂಘಟಿತ ಸಾರಿಗೆ ಕಾರ್ಮಿಕ ಸಂಘಟನೆ ಈಗಾಗಲೇ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಸಿಟಿ ಬಸ್ಗಳು ಮತ್ತು ಇತರ ಪ್ರದೇಶಗಳಿಗೆ ತೆರಳುವ ಖಾಸಗಿ ಬಸ್ ಮಾಲಕರು ಸೋಮವಾರ ಸಭೆ ನಡೆಸಿ ನಿರ್ಧಾರಕ್ಕೆ ಬರಲಿದ್ದಾರೆ.
ದ.ಕ. ಬೀದಿಬದಿ ವ್ಯಾಪಾರಸ್ಥರ ಸಂಘವು ಬಂದ್ಗೆ ಬೆಂಬಲ ಸೂಚಿಸಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆಯ ಸಮರ್ಪಕ ಜಾರಿ ಮಾಡಬೇಕು. ಮೋದಿ ಸರಕಾರದ ಅವಧಿಯಲ್ಲಿ ಬೀದಿಬದಿ ವ್ಯಾಪಾರಿ ಗಳಿಗೆ ಯಾವುದೇ ಯೋಜನೆಗಳನ್ನು ರೂಪಿಸದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ತಿಳಿಸಿದ್ದಾರೆ. ಸಾರ್ವತ್ರಿಕ ಮುಷ್ಕರವನ್ನು ಪಿಂಚಣಿ ದಾರರ ಸಂಘ ಬೆಂಬಲಿಸುತ್ತದೆ ಹಾಗೂ ಪಿಂಚಣಿದಾರರಿಗೆ ಮಾಸಿಕ ಪಿಂಚಣಿ 6,000 ರೂ. ಹಾಗೂ ಇದಕ್ಕೆ ತುಟ್ಟಿಭತ್ತೆಯನ್ನು ಸೇರಿಸಬೇಕೆಂದು ಒತ್ತಾಯಿಸುತ್ತದೆ ಎಂದು ಉಡುಪಿ ಪಿಂಚಣಿದಾರರ ಸಂಘ ತಿಳಿಸಿದೆ.
ಬಹುತೇಕ ಸಂದರ್ಭ ಬಂದ್ಗೆ ಕರೆ ನೀಡದೆ ಇರುವ ಸಂಘಟನೆಗಳೂ ಆ ದಿನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಣಯ ತಾಳುವುದಿರುತ್ತದೆ. ಹೀಗಾದರೆ ಉಡುಪಿ ಜಿಲ್ಲೆಯಲ್ಲಿಯೂ ಟ್ಯಾಕ್ಸಿ, ರಿಕ್ಷಾ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬ್ಯಾಂಕ್ ನೌಕರರ ಸಂಘಟನೆಗಳೂ ಬಂದ್ಗೆ ಬೆಂಬಲ ನೀಡಿರುವ ಕಾರಣ ಬ್ಯಾಂಕ್ ವ್ಯವಹಾರಗಳೂ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಜಿಲ್ಲಾ ರಿಕ್ಷಾ ಚಾಲಕರ ಸಂಘ, ಸಿಪಿಐ (ಎಂ), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಸಿಪಿಐ ಬೆಂಬಲ ಸೂಚಿಸಿವೆ. ಮೋಟಾರ್ ಟ್ರಾನ್ಸ್ಪೊರ್ಟ್ ಆ್ಯಂಡ್ ಎಂಜಿನಿಯರಿಂಗ್ ವರ್ಕರ್ಸ್ ಯೂನಿಯನ್ ಬೆಂಬಲಿತ ಕಾರ್ಮಿಕ ಸಂಘಟನೆ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘದ (ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ರಾಜ್ಯ ಪಿಂಚಣಿದಾರರ ಸಂಘದ, ಅಖೀಲ ಭಾರತ ಬೀಡಿ ಫೆಡರೇಶನ್ (ಸಿಐಟಿಯು) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಆ ದಿನದ ಪರಿಸ್ಥಿತಿಯನ್ನು ಅವಲೋಕಿಸಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬಸ್ ಸಂಚಾರ ಕಾರ್ಯಾಚರಿಸಲಾಗುವುದು.
ದೀಪಕ್ ಕುಮಾರ್, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು