ಸಲಿಂಗಕಾಮದಿಂದ ನಾಶ: ಪಾದ್ರಿ
Team Udayavani, Sep 11, 2018, 10:47 AM IST
ಕೊಯಮತ್ತೂರು: ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ನ್ಯಾಯಾಲಯದ ಆವರಣದಲ್ಲೇ ಸಲಿಂಗಕಾಮದ ವಿರುದ್ಧ ಪಾದ್ರಿಯೊಬ್ಬರು ಘೋಷಣೆ ಕೂಗಿದ ಘಟನೆ ನಡೆದಿದೆ.
ಪುಲಿಯಕುಲಂ ಚರ್ಚ್ನ ಫಾದರ್ ಫೆಲಿಕ್ಸ್ ಜೆಬಾಸಿಂಗ್ ಸೋಮವಾರ ಕೋರ್ಟ್ ಆವರಣದಲ್ಲಿ ಏಕಾಏಕಿ ಸುಪ್ರೀಂ ತೀರ್ಪಿನ ವಿರುದ್ಧ ಘೋಷಣೆ ಕೂಗತೊಡಗಿದರು. ಸಲಿಂಗ ವಿವಾಹವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ ಎಂದೂ ಬೊಬ್ಬಿಟ್ಟರು.
“ಯಾರೂ ಸಲಿಂಗಕಾಮಕ್ಕೆ ಬೆಂಬಲ ಕೊಡಬೇಡಿ. ಸಲಿಂಗವಿವಾಹ ಸಮಾಜವನ್ನು ವಿನಾಶದತ್ತ ಕೊಂಡೊಯ್ಯುತ್ತವೆ. ಬೈಬಲ್ನಲ್ಲಿ ಹೇಳಿರುವಂತೆ, ಸೊಡೋಮ್ ಮತ್ತು ಗೊಮೋರಾ ನಗರಗಳು ಸಲಿಂಗಕಾಮಕ್ಕೆ ಅವಕಾಶ ನೀಡಿದ್ದವು. ಅದೇ ಕಾರಣಕ್ಕೆ ಭಗವಂತ ಆ ಎರಡೂ ನಗರಗಳನ್ನು ನಾಶ ಮಾಡಿದ’ ಎಂದು ಪಾದ್ರಿ ಕೂಗಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡ ಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ