ಸಲಿಂಗಕಾಮದಿಂದ ನಾಶ: ಪಾದ್ರಿ
Team Udayavani, Sep 11, 2018, 10:47 AM IST
ಕೊಯಮತ್ತೂರು: ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ನ್ಯಾಯಾಲಯದ ಆವರಣದಲ್ಲೇ ಸಲಿಂಗಕಾಮದ ವಿರುದ್ಧ ಪಾದ್ರಿಯೊಬ್ಬರು ಘೋಷಣೆ ಕೂಗಿದ ಘಟನೆ ನಡೆದಿದೆ.
ಪುಲಿಯಕುಲಂ ಚರ್ಚ್ನ ಫಾದರ್ ಫೆಲಿಕ್ಸ್ ಜೆಬಾಸಿಂಗ್ ಸೋಮವಾರ ಕೋರ್ಟ್ ಆವರಣದಲ್ಲಿ ಏಕಾಏಕಿ ಸುಪ್ರೀಂ ತೀರ್ಪಿನ ವಿರುದ್ಧ ಘೋಷಣೆ ಕೂಗತೊಡಗಿದರು. ಸಲಿಂಗ ವಿವಾಹವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ ಎಂದೂ ಬೊಬ್ಬಿಟ್ಟರು.
“ಯಾರೂ ಸಲಿಂಗಕಾಮಕ್ಕೆ ಬೆಂಬಲ ಕೊಡಬೇಡಿ. ಸಲಿಂಗವಿವಾಹ ಸಮಾಜವನ್ನು ವಿನಾಶದತ್ತ ಕೊಂಡೊಯ್ಯುತ್ತವೆ. ಬೈಬಲ್ನಲ್ಲಿ ಹೇಳಿರುವಂತೆ, ಸೊಡೋಮ್ ಮತ್ತು ಗೊಮೋರಾ ನಗರಗಳು ಸಲಿಂಗಕಾಮಕ್ಕೆ ಅವಕಾಶ ನೀಡಿದ್ದವು. ಅದೇ ಕಾರಣಕ್ಕೆ ಭಗವಂತ ಆ ಎರಡೂ ನಗರಗಳನ್ನು ನಾಶ ಮಾಡಿದ’ ಎಂದು ಪಾದ್ರಿ ಕೂಗಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡ ಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್