ಸಲಿಂಗಕಾಮದಿಂದ ನಾಶ: ಪಾದ್ರಿ
Team Udayavani, Sep 11, 2018, 10:47 AM IST
ಕೊಯಮತ್ತೂರು: ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ನ್ಯಾಯಾಲಯದ ಆವರಣದಲ್ಲೇ ಸಲಿಂಗಕಾಮದ ವಿರುದ್ಧ ಪಾದ್ರಿಯೊಬ್ಬರು ಘೋಷಣೆ ಕೂಗಿದ ಘಟನೆ ನಡೆದಿದೆ.
ಪುಲಿಯಕುಲಂ ಚರ್ಚ್ನ ಫಾದರ್ ಫೆಲಿಕ್ಸ್ ಜೆಬಾಸಿಂಗ್ ಸೋಮವಾರ ಕೋರ್ಟ್ ಆವರಣದಲ್ಲಿ ಏಕಾಏಕಿ ಸುಪ್ರೀಂ ತೀರ್ಪಿನ ವಿರುದ್ಧ ಘೋಷಣೆ ಕೂಗತೊಡಗಿದರು. ಸಲಿಂಗ ವಿವಾಹವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ ಎಂದೂ ಬೊಬ್ಬಿಟ್ಟರು.
“ಯಾರೂ ಸಲಿಂಗಕಾಮಕ್ಕೆ ಬೆಂಬಲ ಕೊಡಬೇಡಿ. ಸಲಿಂಗವಿವಾಹ ಸಮಾಜವನ್ನು ವಿನಾಶದತ್ತ ಕೊಂಡೊಯ್ಯುತ್ತವೆ. ಬೈಬಲ್ನಲ್ಲಿ ಹೇಳಿರುವಂತೆ, ಸೊಡೋಮ್ ಮತ್ತು ಗೊಮೋರಾ ನಗರಗಳು ಸಲಿಂಗಕಾಮಕ್ಕೆ ಅವಕಾಶ ನೀಡಿದ್ದವು. ಅದೇ ಕಾರಣಕ್ಕೆ ಭಗವಂತ ಆ ಎರಡೂ ನಗರಗಳನ್ನು ನಾಶ ಮಾಡಿದ’ ಎಂದು ಪಾದ್ರಿ ಕೂಗಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡ ಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು