ಲಾಲು ಪ್ರಸಾದ್ ಯಾದವ್ಗೆ ಡಿಪ್ರೆಶನ್ : ರಿಮ್ಸ್ ವೈದ್ಯಕೀಯ ವರದಿ
Team Udayavani, Sep 11, 2018, 11:46 AM IST
ರಾಂಚಿ : ಬಹುಕೋಟಿ ವೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೆರೆಮನೆಯಲ್ಲಿ ಮಾನಸಿಕ ಒತ್ತಡದಿಂದ (ಡಿಪ್ರೆಶನ್) ಬಳಲುತ್ತಿದ್ದಾರೆ ಎಂದು ಇಲ್ಲಿನ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಆರ್ಐಎಂಎಸ್)ನ ನಿರ್ದೇಶಕ ಆರ್ ಕೆ ಶ್ರೀವಾಸ್ತವ ತಿಳಿಸಿದ್ದಾರೆ.
ಲಾಲು ಡಿಪ್ರೆಶನ್ ನಿಂದ ಬಳಲುತ್ತಿರುವುದು ಈ ಹಿಂದೆ ಏಮ್ಸ್ ಮೆಡಿಕಲ್ ಡಿಸ್ಚಾರ್ಜ್ ಸ್ಲಿಪ್ನಲ್ಲಿ ಕೂಡ ಉಲ್ಲೇಖೀಸಲಾಗಿತ್ತು. ಇದೀಗ “ರಿಮ್ಸ್’ನಲ್ಲಿ ಲಾಲು ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಕೂಡ ಇದನ್ನೇ ತಮ್ಮ ವರದಿಯಲ್ಲೂ ಉಲ್ಲೇಖೀಸಿದ್ದಾರೆ ಎಂದು ಶ್ರೀವಾಸ್ತವ ಹೇಳಿದರು.
ಲಾಲು ಅವರ ಇಡಿಯ ಕುಟುಂಬವೇ ಒಂದೆಡೆ ಭ್ರಷ್ಟಾಚಾರದ ಕೇಸುಗಳಲ್ಲಿ ಮುಳುಗಿ ಹೋಗಿದೆಯಾದರೆ ಇನ್ನೊಂದೆಡೆ ಅವರ ಇಬ್ಬರು ಪುತ್ರರಲ್ಲಿ ರಾಜಕೀಯ ಪಾರಮ್ಯದ ಜಟಾಪಟಿ ನಡೆಯುತ್ತಿದೆ. ಈ ಕಾರಣಗಳೇ ಲಾಲು ಡಿಪ್ರೆಶನ್ಗೆ ಕಾರಣವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲಾಲು ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ತಮ್ಮ ಉತ್ತರಾಧಿಕಾರಿಯಾಗಬೇಕೆಂಬ ಒಲವನ್ನು ಬಹಿರಂಗವಾಗಿ ತೋರಿಸಿಕೊಂಡಿದ್ದಾರೆ. ಆದರೆ ಲಾಲು ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (ಹಿಂದಿನ ಮಹಾ ಘಟಬಂಧನ ಸರಕಾರದಲ್ಲಿ ಹಿರಿಯ ಸಚಿವರಾಗಿದ್ದವರು) ಅವರಿಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಷ್ಠೆ, ಸ್ಥಾನಮಾನ, ಗೌರವಾದರಗಳಿವೆ ಎಂದು ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ