ಲಾಲು ಪ್ರಸಾದ್ ಯಾದವ್ಗೆ ಡಿಪ್ರೆಶನ್ : ರಿಮ್ಸ್ ವೈದ್ಯಕೀಯ ವರದಿ
Team Udayavani, Sep 11, 2018, 11:46 AM IST
ರಾಂಚಿ : ಬಹುಕೋಟಿ ವೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೆರೆಮನೆಯಲ್ಲಿ ಮಾನಸಿಕ ಒತ್ತಡದಿಂದ (ಡಿಪ್ರೆಶನ್) ಬಳಲುತ್ತಿದ್ದಾರೆ ಎಂದು ಇಲ್ಲಿನ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಆರ್ಐಎಂಎಸ್)ನ ನಿರ್ದೇಶಕ ಆರ್ ಕೆ ಶ್ರೀವಾಸ್ತವ ತಿಳಿಸಿದ್ದಾರೆ.
ಲಾಲು ಡಿಪ್ರೆಶನ್ ನಿಂದ ಬಳಲುತ್ತಿರುವುದು ಈ ಹಿಂದೆ ಏಮ್ಸ್ ಮೆಡಿಕಲ್ ಡಿಸ್ಚಾರ್ಜ್ ಸ್ಲಿಪ್ನಲ್ಲಿ ಕೂಡ ಉಲ್ಲೇಖೀಸಲಾಗಿತ್ತು. ಇದೀಗ “ರಿಮ್ಸ್’ನಲ್ಲಿ ಲಾಲು ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಕೂಡ ಇದನ್ನೇ ತಮ್ಮ ವರದಿಯಲ್ಲೂ ಉಲ್ಲೇಖೀಸಿದ್ದಾರೆ ಎಂದು ಶ್ರೀವಾಸ್ತವ ಹೇಳಿದರು.
ಲಾಲು ಅವರ ಇಡಿಯ ಕುಟುಂಬವೇ ಒಂದೆಡೆ ಭ್ರಷ್ಟಾಚಾರದ ಕೇಸುಗಳಲ್ಲಿ ಮುಳುಗಿ ಹೋಗಿದೆಯಾದರೆ ಇನ್ನೊಂದೆಡೆ ಅವರ ಇಬ್ಬರು ಪುತ್ರರಲ್ಲಿ ರಾಜಕೀಯ ಪಾರಮ್ಯದ ಜಟಾಪಟಿ ನಡೆಯುತ್ತಿದೆ. ಈ ಕಾರಣಗಳೇ ಲಾಲು ಡಿಪ್ರೆಶನ್ಗೆ ಕಾರಣವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲಾಲು ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ತಮ್ಮ ಉತ್ತರಾಧಿಕಾರಿಯಾಗಬೇಕೆಂಬ ಒಲವನ್ನು ಬಹಿರಂಗವಾಗಿ ತೋರಿಸಿಕೊಂಡಿದ್ದಾರೆ. ಆದರೆ ಲಾಲು ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (ಹಿಂದಿನ ಮಹಾ ಘಟಬಂಧನ ಸರಕಾರದಲ್ಲಿ ಹಿರಿಯ ಸಚಿವರಾಗಿದ್ದವರು) ಅವರಿಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಷ್ಠೆ, ಸ್ಥಾನಮಾನ, ಗೌರವಾದರಗಳಿವೆ ಎಂದು ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್