HDFC ಬ್ಯಾಂಕ್ ಉಪಾಧ್ಯಕ್ಷರ ಕೊಲೆ ನಡೆದಿದ್ದು ಕೇವಲ 30 ಸಾವಿರಕ್ಕಾಗಿ
Team Udayavani, Sep 11, 2018, 2:18 PM IST
ಮುಂಬಯಿ : ಕಳೆದ ಭಾನುವಾರ ಶವವಾಗಿ ಪತ್ತೆಯಾಗಿದ್ದ ಎಚ್ ಡಿ ಎಫ್ ಸಿ ಬ್ಯಾಂಕ್ ಉಪಾಧ್ಯಕ್ಷ ಸಿದ್ಧಾರ್ಥ ಸಾಂಘವಿ ಅವರ ಕೊಲೆ ರಹಸ್ಯ ಬಯಲಾಗಿದ್ದು, ಕೇವಲ 30 ,000 ರೂಪಾಯಿಗಾಗಿ ಹತ್ಯೆಗೈಯಲಾಗಿರುವ ಕುರಿತು ತನಿಖೆಯಲ್ಲಿ ತಿಳಿದು ಬಂದಿದೆ.
ಹತ್ಯೆ ಸಂಬಂಧ ಪೊಲೀಸರು ಬಂಧಿಸಿರುವ 20ರ ಹರೆಯದ ಆರೋಪಿ ಸರ್ಫರಾಜ್ ಶೇಖ್ ಅಲಿಯಾಸ್ ರಾಯಿಸ್ ಈ ವಿಚಾರನ್ನು ಬಾಯ್ಬಿಟ್ಟಿದ್ದಾನೆ,ಆತನ ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
39ರ ಹರೆಯದ ಸಾಂಘವಿ ಅವರು ಸೆ.5ರ ಗುರುವಾರದಂದು ಇಲ್ಲಿನ ಕಮಲಾ ಮಿಲ್ಸ್ ಕಚೇರಿಯಿಂದ ನಾಪತ್ತೆಯಾಗಿದ್ದರು. ಎನ್ಎಂ ಜೋಷಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.
ಬಂಧಿತ ಶೇಖ್ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದು, 30,000 ರೂಪಾಯಿ ಸಾಲ ಮರು ಪಾವತಿಯ ಇಎಮ್ಐಗಾಗಿ ಕೊಲೆಗೈದಿರುವುದಾಗಿ ಹೇಳಿಕೊಂಡಿದ್ದಾನೆ.
ಸಾಂಘಅವರು ನಾಪತ್ತೆಯಾದ ದಿನ ಮನೆಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಮಗ ಸುರಕ್ಷಿತವಾಗಿದ್ದು ಚಿಂತೆ ಮಾಡಬೇಡಿ ಎಂದಿದ್ದ. ಈ ಕರೆ ಸಾಂಘವಿ ಅವರ ಮೊಬೈಲ್ನಿಂದ ಮಾಡಲಾಗಿತ್ತು, ಆದರೆ ಬೇರೆ ಸಿಮ್ ಕಾರ್ಡ್ ಬಳಸಲಾಗಿತ್ತು.
ಮೊಬೈಲ್ ಕರೆಯ ಜಾಡನ್ನು ಬೆನ್ನಟ್ಟಿದ ಪೊಲೀಸರು ಪ್ರಕರಣವನ್ನು ಕೂಡಲೇ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು