ರೂಪಾಯಿ-ಷೇರು ಕುಸಿತ ; ತೈಲಬೆಲೆ ಜಿಗಿತ


Team Udayavani, Sep 12, 2018, 4:09 PM IST

fuel.jpg

ಮುಂಬಯಿ: ರೂಪಾಯಿ ಮೌಲ್ಯ ಕುಸಿತ, ತೈಲ ಬೆಲೆ ಏರಿಕೆಯ ಆಘಾತದ ನಡುವೆಯೇ ಷೇರುಪೇಟೆಯ ತಲ್ಲಣ ಮುಂದುವರಿದಿದೆ. ಮಂಗಳವಾರದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 509.04 ಅಂಕಗಳಷ್ಟು ಕುಸಿತ ಕಂಡಿದ್ದು, ವಹಿವಾಟಿನ ಅಂತ್ಯಕ್ಕೆ 37,413.13ಕ್ಕೆ ತಲುಪಿದೆ. ಕಳೆದ ಆರು ತಿಂಗಳಲ್ಲೇ ಇದು ಗರಿಷ್ಠ ಕುಸಿತ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ. 

ಇನ್ನು, ನಿಫ್ಟಿ 150.60 ಅಂಕ ಇಳಿದು, 11,287.50ರಲ್ಲಿ ವಹಿವಾಟು ಅಂತ್ಯಗೊಳಿಸಿದೆ. ರೂಪಾಯಿ ಮೌಲ್ಯ ಕುಸಿತ, ಕಚ್ಚಾ ತೈಲದ ದರ ಏರಿಕೆ ಹಾಗೂ ಅಮೆರಿಕ-ಚೀನಾ ನಡುವಿನ ವ್ಯಾಪಾರ ಸಮರ ಕೂಡ ಸೆನ್ಸೆಕ್ಸ್‌ ಪಾತಾಳಕ್ಕಿಳಿಯಲು ಕಾರಣ ಎಂದು ಹೇಳಲಾಗಿದೆ.

ರೂ. ಮೌಲ್ಯ ಕುಸಿತ: ಇದೇ ವೇಳೆ, ಡಾಲರ್‌ ವಿರುದ್ಧ ರೂಪಾಯಿ ಮೌಲ್ಯವೂ ದಾಖಲೆಯ ಮಟ್ಟಕ್ಕೆ ಕುಸಿದಿದೆ. ಮಂಗಳವಾರ ಆರಂಭದಲ್ಲಿ ಡಾಲರ್‌ ಮುಂದೆ 20 ಪೈಸೆಯಷ್ಟು ಏರಿಕೆ ಕಂಡಿತ್ತಾದರೂ, ಅನಂತರ ಕುಸಿಯುತ್ತಾ ದಿನಾಂತ್ಯಕ್ಕೆ 28 ಪೈಸೆಯಷ್ಟು ಇಳಿಕೆಯಾಗಿ, ಒಂದು ಡಾಲರ್‌ಗೆ ಪ್ರತಿಯಾಗಿ 72.73 ರೂ.ಗಳಿಗೆ ಬಂದು ಮುಟ್ಟಿದೆ. 

ಮತ್ತೆ ತೈಲ ಬಿಸಿ: ಕಳೆದ ಹದಿನೈದು ದಿನಗಳಿಂದ ಏರುತ್ತಿರುವ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಮಂಗಳವಾರ 14 ಪೈಸೆಗಳ ಏರಿಕೆ ಕಂಡಿದೆ. ದಿಲ್ಲಿಯಲ್ಲಿ ಪ್ರತಿ ಲೀ. ಪೆಟ್ರೋಲ್‌ಗೆ 80.87 ರೂ., ಡೀಸೆಲ್‌ಗೆ 72.97 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಕ್ರಮವಾಗಿ 88.26 ರೂ. ಹಾಗೂ 77.47 ರೂ. ಗಳಿಗೆ ಮುಟ್ಟಿದೆ. 

ಪಿಐಎಲ್‌ ಸಲ್ಲಿಕೆ
ಪ್ರತಿದಿನ ತೈಲ ದರ ಪರಿಷ್ಕರಣೆ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್‌ಗೆ ಪೂಜಾ ಮಹಾಜನ್‌ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾ ವಣೆಗೂ ಮುನ್ನ 22 ದಿನಗಳ ಕಾಲ ತೈಲ ಬೆಲೆ ಪರಿಷ್ಕರಿಸಿರಲಿಲ್ಲ. ಬೇಕಾದಾಗ ದೈನಂದಿನ ಬೆಲೆ ಪರಿಷ್ಕರಣೆ ನಿಲ್ಲಿಸಬಹುದಾದರೆ ಈಗ ಅದು ಏಕೆ ಸಾಧ್ಯವಿಲ್ಲ, ತೈಲಗಳ ಮೇಲೆ ಒಂದು ಸ್ಥಿರ ತೈಲ ಬೆಲೆ ನಿಗದಿಗೊಳಿಸಬಾರದೇಕೆ ಎಂದು ಅವರು ಕೇಂದ್ರವನ್ನು ಪ್ರಶ್ನಿಸಿದ್ದಾರೆ. ಬುಧವಾರ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ. 

ಇಲ್ಲಿ ಪೆಟ್ರೋಲ್‌ಗೆ 90 ರೂ.!
ಮುಂಬೈನಿಂದ ಪೂರ್ವಕ್ಕೆ 500 ಕಿ.ಮೀ. ದೂರವಿರುವ ಪರ್ಬಾನಿ ಎಂಬ ಊರಿನಲ್ಲಿ ಪೆಟ್ರೋಲ್‌ ಬೆಲೆ 90 ರೂ.ಗಳ ಗಡಿ ದಾಟಿದೆ. ಕೇವಲ 3,10,000 ಜನಸಂಖ್ಯೆ ಇರುವ ಈ ಪಟ್ಟಣದಲ್ಲಿ ಸೋಮವಾರವೇ ಪೆಟ್ರೋಲ್‌ ಬೆಲೆ 89.97 ರೂ. ಇತ್ತು. ಇನ್ನು, ಈ ಊರಿನಲ್ಲಿ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 77.92 ರೂ.ಗಳಿಂದ 78.06 ರೂ.ಗಳಿಗೆ ಏರಿದೆ. 

ಬೆಲೆ ಇಳಿಸಿದ ದೀದಿ
ಪೆಟ್ರೋಲ್‌ ಮೇಲಿನ ತೆರಿಗೆಯನ್ನು ಇಳಿಸಿದ ರಾಜ್ಯಗಳ ಪಟ್ಟಿಗೆ ಪಶ್ಚಿಮ ಬಂಗಾಳ ಸೇರ್ಪಡೆಗೊಂಡಿದೆ. ಸಿಎಂ ಮಮತಾ ಬ್ಯಾನರ್ಜಿ ತೈಲಗಳ ಮೇಲಿನ ವ್ಯಾಟ್‌ ಇಳಿಸಿದ್ದು, ಪೆಟ್ರೋಲ್‌, ಡೀಸೆಲ್‌ ದರ 1 ರೂ. ಇಳಿಕೆಯಾಗಿದೆ.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.