ಎನ್‌ಪಿಎ ಕೆಸರೆರಚಾಟ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ


Team Udayavani, Sep 12, 2018, 4:25 PM IST

npa.jpg

ಹೊಸದಿಲ್ಲಿ: ದೇಶದಲ್ಲಿ ಅನುತ್ಪಾದಕ ಆಸ್ತಿ (ಎನ್‌ಪಿಎ) ಹೆಚ್ಚಳವಾಗಲು ಯುಪಿಎ-2 ಸರಕಾರದ ಹಗರಣಗಳು ಹಾಗೂ ನೀತಿಗ್ರಹಣ ಕಾರಣ ಎಂದು ಸಂಸದೀಯ ಸಮಿತಿಗೆ ಆರ್‌ಬಿಐ ಮಾಜಿ ಗವರ್ನರ್‌ ರಘುರಾಂ ರಾಜನ್‌ ನೀಡಿದ ಹೇಳಿಕೆಯು ಈಗ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣ ವಾಗಿದೆ. ರಾಜನ್‌ ಹೇಳಿಕೆಯನ್ನು ಪ್ರಸ್ತಾವಿಸಿಕೊಂಡು ಕಾಂಗ್ರೆಸ್‌ ವಿರುದ್ಧ ಆಡಳಿತಾರೂಢ ಬಿಜೆಪಿ ಹರಿಹಾಯ್ದರೆ, ಅತ್ತ ಕಾಂಗ್ರೆಸ್‌ ಕೂಡ ತಿರುಗೇಟು ನೀಡಿದೆ. ಒಟ್ಟಿನಲ್ಲಿ ರಾಜಕೀಯ ಕೆಸರೆರಚಾಟಕ್ಕೆ ರಾಜನ್‌ ನಾಂದಿಹಾಡಿದಂತಾಗಿದೆ.

ರಾಜನ್‌ ಹೇಳಿಕೆಯನ್ನು ಉಲ್ಲೇಖೀಸಿ ಮಂಗಳವಾರ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವೆ ಸ್ಮತಿ ಇರಾನಿ, “ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಸರಕಾರವು ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯ ಮೂಲಕ್ಕೇ ಕೊಡಲಿಯೇಟು ನೀಡಿತು. 2006-08ರ ಅವಧಿಯಲ್ಲಿ ಯುಪಿಎ ಸರಕಾರದ ಕಾರ್ಯನಿರ್ವಹಣೆಯು ಎನ್‌ಪಿಎ ಹೆಚ್ಚಳಕ್ಕೆ ಕಾರಣವಾಯಿತು ಎಂದು ಸ್ವತಃ ರಾಜನ್‌ ಅವರೇ ಹೇಳಿದ್ದಾರೆ. ಎನ್‌ಪಿಎಗೆ ಕಾಂಗ್ರೆಸ್‌ ಕಾರಣ ಎಂದು ನಾವು ಹೇಳುತ್ತಲೇ ಬಂದಿದ್ದೆವು. ಈಗ ರಾಜನ್‌ ಹೇಳಿಕೆ ಅದನ್ನು ಪುಷ್ಟೀಕರಿಸಿದ್ದು, ಅದು ಕಾಂಗ್ರೆಸ್‌ನ ಭ್ರಷ್ಟಾಚಾರದ ಗಟ್ಟಿ ಧ್ವನಿಯಾಗಿ ಹೊರಹೊಮ್ಮಿದೆ’ ಎಂದಿದ್ದಾರೆ.

ಇದೇ ವೇಳೆ, ನ್ಯಾಶನಲ್‌ ಹೆರಾಲ್ಡ್‌ ಪ್ರಕರಣ ಕುರಿತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕಾಲೆಳೆದ ಸಚಿವೆ ಇರಾನಿ, “ಪ್ರಧಾನಿ ಮೋದಿ ಅವರನ್ನು ಕಂಡ ಕೂಡಲೇ ಅಪ್ಪಿಕೊಳ್ಳುವ ರಾಹುಲ್‌, ಐಟಿ ಅಧಿಕಾರಿಗಳನ್ನು ಕಂಡೊಡನೆ ಓಡಿಹೋಗುತ್ತಿರುವುದೇಕೆ? ಇದಕ್ಕೆ ಅವರು ಉತ್ತರಿಸಬೇಕು’ ಎಂದು ಕುಟುಕಿದ್ದಾರೆ.

ಕಾಂಗ್ರೆಸ್‌ ತಿರುಗೇಟು: ಸ್ಮತಿ ಇರಾನಿ ಹೇಳಿಕೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲಾ, ಸಚಿವೆ ಇರಾನಿ ಹಾಗೂ ರಾಜನ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. “ಯುಪಿಎ ಆಡಳಿತ ಕೊನೆಗೊಂಡಾಗ 2014ರಲ್ಲಿ ಒಟ್ಟು ಅನುತ್ಪಾದಕ ಆಸ್ತಿ ಪ್ರಮಾಣ 2.83 ಲಕ್ಷ ಕೋಟಿ ರೂ. ಆಗಿತ್ತು. ಆದರೆ, ಎನ್‌ಡಿಎ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಎನ್‌ಪಿಎ ಮೊತ್ತ 12 ಲಕ್ಷ ಕೋಟಿ ರೂ.ಗೆ ಏರಿಕೆಯಾಯಿತು. ಅಂದರೆ, ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಎನ್‌ಪಿಎ 9.17 ಲಕ್ಷ ಕೋಟಿ ಏರಿಕೆಯಾಗಿದೆ. ಹಾಗಾಗಿ ಎನ್‌ಡಿಎ ಸರಕಾರವನ್ನೂ ಇದಕ್ಕೆ ಹೊಣೆಯಾಗಿಸಬೇಕಲ್ಲವೇ’ ಎಂದು ಸುಜೇìವಾಲಾ ಪ್ರಶ್ನಿಸಿದ್ದಾರೆ. ಜತೆಗೆ, ಒಂದು ವೇಳೆ ರಾಜನ್‌ ಹೇಳಿಕೆ ಪ್ರಕಾರ, ಯುಪಿಎ ಅವಧಿ ಯಲ್ಲಾದ ಎನ್‌ಪಿಎ 2.83 ಲಕ್ಷ ಕೋಟಿ ರೂ. ಆಗಿದ್ದರೆ, ಈಗಲೂ ಎನ್‌ಪಿಎ ಮೊತ್ತ ಅಷ್ಟೇ ಇರಬೇಕಿತ್ತಲ್ಲವೇ? ಹಾಗಿದ್ದರೆ ಅದು 12 ಲಕ್ಷ ಕೋಟಿ ರೂ. ಆಗಿದ್ದು ಹೇಗೆ ಎಂದೂ ಸುಜೇìವಾಲಾ ಕೇಳಿದ್ದಾರೆ.

ಹೈಪ್ರೊಫೈಲ್‌ ವಂಚಕರ ಪಟ್ಟಿ ಕೊಟ್ಟಿದ್ದೆ: ರಾಜನ್‌
ಯುಪಿಎ ಸರಕಾರದ ಅವಧಿಯಲ್ಲಿ ಹೈಪ್ರೊಫೈಲ್‌ ವಂಚಕರ ಪಟ್ಟಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ಸಲ್ಲಿಸಿದ್ದೆ ಎಂದೂ ಸಂಸದೀಯ ಸಮಿತಿಗೆ ರಾಜನ್‌ ಮಾಹಿತಿ ನೀಡಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ. ನಾನು ಗವರ್ನರ್‌ ಆಗಿದ್ದಾಗ ಆರ್‌ಬಿಐ ವಂಚನೆ ನಿಗಾ ಘಟಕವನ್ನು ಸ್ಥಾಪಿಸಿತು. ಈ ಘಟಕವು ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ ತನಿಖಾ ಸಂಸ್ಥೆಗಳಿಗೆ ವರದಿ ನೀಡುತ್ತಿತ್ತು. ನಾನು ಕೂಡ ಪ್ರಧಾನಿ ಕಾರ್ಯಾಲಯಕ್ಕೆ ಕೆಲವು ಹೈಪ್ರೊಫೈಲ್‌ ವಂಚಕರ ಪಟ್ಟಿಯನ್ನು ಸಲ್ಲಿಸಿದ್ದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದೆ. ಆದರೆ, ಅನಂತರ ಆ ವಿಚಾರದಲ್ಲಿ ಆದ ಪ್ರಗತಿ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ರಾಜನ್‌ ಹೇಳಿದ್ದಾರೆ. ಅಲ್ಲದೆ, ಒಬ್ಬ ವಂಚಕನ ವಿರುದ್ಧವಾದರೂ ಕ್ರಮ ಕೈಗೊಂಡಿದ್ದರೆ, ಸ್ವಲ್ಪವಾದರೂ ಬಿಸಿ ಮುಟ್ಟಿಸಿದಂತಾಗುತ್ತಿತ್ತು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.