ಎನ್‌ಪಿಎ ಕೆಸರೆರಚಾಟ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ


Team Udayavani, Sep 12, 2018, 4:25 PM IST

npa.jpg

ಹೊಸದಿಲ್ಲಿ: ದೇಶದಲ್ಲಿ ಅನುತ್ಪಾದಕ ಆಸ್ತಿ (ಎನ್‌ಪಿಎ) ಹೆಚ್ಚಳವಾಗಲು ಯುಪಿಎ-2 ಸರಕಾರದ ಹಗರಣಗಳು ಹಾಗೂ ನೀತಿಗ್ರಹಣ ಕಾರಣ ಎಂದು ಸಂಸದೀಯ ಸಮಿತಿಗೆ ಆರ್‌ಬಿಐ ಮಾಜಿ ಗವರ್ನರ್‌ ರಘುರಾಂ ರಾಜನ್‌ ನೀಡಿದ ಹೇಳಿಕೆಯು ಈಗ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣ ವಾಗಿದೆ. ರಾಜನ್‌ ಹೇಳಿಕೆಯನ್ನು ಪ್ರಸ್ತಾವಿಸಿಕೊಂಡು ಕಾಂಗ್ರೆಸ್‌ ವಿರುದ್ಧ ಆಡಳಿತಾರೂಢ ಬಿಜೆಪಿ ಹರಿಹಾಯ್ದರೆ, ಅತ್ತ ಕಾಂಗ್ರೆಸ್‌ ಕೂಡ ತಿರುಗೇಟು ನೀಡಿದೆ. ಒಟ್ಟಿನಲ್ಲಿ ರಾಜಕೀಯ ಕೆಸರೆರಚಾಟಕ್ಕೆ ರಾಜನ್‌ ನಾಂದಿಹಾಡಿದಂತಾಗಿದೆ.

ರಾಜನ್‌ ಹೇಳಿಕೆಯನ್ನು ಉಲ್ಲೇಖೀಸಿ ಮಂಗಳವಾರ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವೆ ಸ್ಮತಿ ಇರಾನಿ, “ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಸರಕಾರವು ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯ ಮೂಲಕ್ಕೇ ಕೊಡಲಿಯೇಟು ನೀಡಿತು. 2006-08ರ ಅವಧಿಯಲ್ಲಿ ಯುಪಿಎ ಸರಕಾರದ ಕಾರ್ಯನಿರ್ವಹಣೆಯು ಎನ್‌ಪಿಎ ಹೆಚ್ಚಳಕ್ಕೆ ಕಾರಣವಾಯಿತು ಎಂದು ಸ್ವತಃ ರಾಜನ್‌ ಅವರೇ ಹೇಳಿದ್ದಾರೆ. ಎನ್‌ಪಿಎಗೆ ಕಾಂಗ್ರೆಸ್‌ ಕಾರಣ ಎಂದು ನಾವು ಹೇಳುತ್ತಲೇ ಬಂದಿದ್ದೆವು. ಈಗ ರಾಜನ್‌ ಹೇಳಿಕೆ ಅದನ್ನು ಪುಷ್ಟೀಕರಿಸಿದ್ದು, ಅದು ಕಾಂಗ್ರೆಸ್‌ನ ಭ್ರಷ್ಟಾಚಾರದ ಗಟ್ಟಿ ಧ್ವನಿಯಾಗಿ ಹೊರಹೊಮ್ಮಿದೆ’ ಎಂದಿದ್ದಾರೆ.

ಇದೇ ವೇಳೆ, ನ್ಯಾಶನಲ್‌ ಹೆರಾಲ್ಡ್‌ ಪ್ರಕರಣ ಕುರಿತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕಾಲೆಳೆದ ಸಚಿವೆ ಇರಾನಿ, “ಪ್ರಧಾನಿ ಮೋದಿ ಅವರನ್ನು ಕಂಡ ಕೂಡಲೇ ಅಪ್ಪಿಕೊಳ್ಳುವ ರಾಹುಲ್‌, ಐಟಿ ಅಧಿಕಾರಿಗಳನ್ನು ಕಂಡೊಡನೆ ಓಡಿಹೋಗುತ್ತಿರುವುದೇಕೆ? ಇದಕ್ಕೆ ಅವರು ಉತ್ತರಿಸಬೇಕು’ ಎಂದು ಕುಟುಕಿದ್ದಾರೆ.

ಕಾಂಗ್ರೆಸ್‌ ತಿರುಗೇಟು: ಸ್ಮತಿ ಇರಾನಿ ಹೇಳಿಕೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲಾ, ಸಚಿವೆ ಇರಾನಿ ಹಾಗೂ ರಾಜನ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. “ಯುಪಿಎ ಆಡಳಿತ ಕೊನೆಗೊಂಡಾಗ 2014ರಲ್ಲಿ ಒಟ್ಟು ಅನುತ್ಪಾದಕ ಆಸ್ತಿ ಪ್ರಮಾಣ 2.83 ಲಕ್ಷ ಕೋಟಿ ರೂ. ಆಗಿತ್ತು. ಆದರೆ, ಎನ್‌ಡಿಎ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಎನ್‌ಪಿಎ ಮೊತ್ತ 12 ಲಕ್ಷ ಕೋಟಿ ರೂ.ಗೆ ಏರಿಕೆಯಾಯಿತು. ಅಂದರೆ, ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಎನ್‌ಪಿಎ 9.17 ಲಕ್ಷ ಕೋಟಿ ಏರಿಕೆಯಾಗಿದೆ. ಹಾಗಾಗಿ ಎನ್‌ಡಿಎ ಸರಕಾರವನ್ನೂ ಇದಕ್ಕೆ ಹೊಣೆಯಾಗಿಸಬೇಕಲ್ಲವೇ’ ಎಂದು ಸುಜೇìವಾಲಾ ಪ್ರಶ್ನಿಸಿದ್ದಾರೆ. ಜತೆಗೆ, ಒಂದು ವೇಳೆ ರಾಜನ್‌ ಹೇಳಿಕೆ ಪ್ರಕಾರ, ಯುಪಿಎ ಅವಧಿ ಯಲ್ಲಾದ ಎನ್‌ಪಿಎ 2.83 ಲಕ್ಷ ಕೋಟಿ ರೂ. ಆಗಿದ್ದರೆ, ಈಗಲೂ ಎನ್‌ಪಿಎ ಮೊತ್ತ ಅಷ್ಟೇ ಇರಬೇಕಿತ್ತಲ್ಲವೇ? ಹಾಗಿದ್ದರೆ ಅದು 12 ಲಕ್ಷ ಕೋಟಿ ರೂ. ಆಗಿದ್ದು ಹೇಗೆ ಎಂದೂ ಸುಜೇìವಾಲಾ ಕೇಳಿದ್ದಾರೆ.

ಹೈಪ್ರೊಫೈಲ್‌ ವಂಚಕರ ಪಟ್ಟಿ ಕೊಟ್ಟಿದ್ದೆ: ರಾಜನ್‌
ಯುಪಿಎ ಸರಕಾರದ ಅವಧಿಯಲ್ಲಿ ಹೈಪ್ರೊಫೈಲ್‌ ವಂಚಕರ ಪಟ್ಟಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ಸಲ್ಲಿಸಿದ್ದೆ ಎಂದೂ ಸಂಸದೀಯ ಸಮಿತಿಗೆ ರಾಜನ್‌ ಮಾಹಿತಿ ನೀಡಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ. ನಾನು ಗವರ್ನರ್‌ ಆಗಿದ್ದಾಗ ಆರ್‌ಬಿಐ ವಂಚನೆ ನಿಗಾ ಘಟಕವನ್ನು ಸ್ಥಾಪಿಸಿತು. ಈ ಘಟಕವು ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ ತನಿಖಾ ಸಂಸ್ಥೆಗಳಿಗೆ ವರದಿ ನೀಡುತ್ತಿತ್ತು. ನಾನು ಕೂಡ ಪ್ರಧಾನಿ ಕಾರ್ಯಾಲಯಕ್ಕೆ ಕೆಲವು ಹೈಪ್ರೊಫೈಲ್‌ ವಂಚಕರ ಪಟ್ಟಿಯನ್ನು ಸಲ್ಲಿಸಿದ್ದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದೆ. ಆದರೆ, ಅನಂತರ ಆ ವಿಚಾರದಲ್ಲಿ ಆದ ಪ್ರಗತಿ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ರಾಜನ್‌ ಹೇಳಿದ್ದಾರೆ. ಅಲ್ಲದೆ, ಒಬ್ಬ ವಂಚಕನ ವಿರುದ್ಧವಾದರೂ ಕ್ರಮ ಕೈಗೊಂಡಿದ್ದರೆ, ಸ್ವಲ್ಪವಾದರೂ ಬಿಸಿ ಮುಟ್ಟಿಸಿದಂತಾಗುತ್ತಿತ್ತು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.