ಮಲ್ಯ, ಜೇಟ್ಲಿ ಮಾತುಕತೆ ಸತ್ಯ, ಸಿಸಿಟಿವಿ ಪರೀಕ್ಷಿಸಿ; ಕಾಂಗ್ರೆಸ್
Team Udayavani, Sep 13, 2018, 4:40 PM IST
ನವದೆಹಲಿ: ನಾನು ದೇಶ ತೊರೆಯುವ ಮುನ್ನ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು ಭಾರತದ ಬ್ಯಾಂಕ್ ಗಳಿಗೆ 9 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡು ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಜೇಟ್ಲಿ ಹಾಗೂ ಮದ್ಯದ ದೊರೆ ಮಲ್ಯ ನಡುವೆ ಒಳಒಪ್ಪಂದ ನಡೆದಿದೆ. ಈ ಹಿನ್ನೆಲೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ದೆಹಲಿಯಲ್ಲಿ ಇಂದು 2ನೇ ಬಾರಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡರು, ಮದ್ಯದ ದೊರೆ ವಿಜಯ್ ಮಲ್ಯ ದೇಶ ತೊರೆಯುವ 2 ದಿನದ ಮೊದಲು ಸಂಸತ್ ನಲ್ಲಿಯೇ ಮಲ್ಯ 15ರಿಂದ 20 ನಿಮಿಷಗಳ ಕಾಲ ಮಾತುಕತೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
ಅರುಣ್ ಜೇಟ್ಲಿ ಈಗ ಸುಳ್ಳು ಹೇಳುತ್ತಿದ್ದಾರೆ. ಯಾಕೆಂದರೆ ಅಂದು ಮಲ್ಯ ಮತ್ತು ಜೇಟ್ಲಿ ಪ್ರತ್ಯೇಕವಾಗಿ ನಡೆಸುತ್ತಿದ್ದ ಮಾತುಕತೆಯನ್ನು ಕಾಂಗ್ರೆಸ್ ಮುಖಂಡ ಪಿಎಲ್ ಪುನಿಯಾ ಪ್ರತ್ಯಕ್ಷ ನೋಡಿದ್ದಾರೆ.
2016ರಲ್ಲಿ ಮಲ್ಯ ದೇಶ ಬಿಟ್ಟು ಪರಾರಿಯಾಗುವ ಮೊದಲು ವಿತ್ತ ಸಚಿವ ಜೇಟ್ಲಿ ಅವರು 20 ನಿಮಿಷಗಳ ಕಾಲ ಕುಳಿತುಕೊಂಡು ಮಾತುಕತೆ ನಡೆಸಿದ್ದಾರೆ. ಅದು ಸಿಸಿಟಿವಿಯಲ್ಲೂ ಸೆರೆಯಾಗಿದೆ. ಹೀಗಾಗಿ ಕ್ರಿಮಿನಲ್ ಮಲ್ಯ ಜೊತೆ ಜೇಟ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದು ಯಾಕೆ ಎಂಬುದನ್ನು ದೇಶದ ಜನತೆಗೆ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಮಾತುಕತೆ ಏನನ್ನು ಸೂಚಿಸುತ್ತದೆ ಎಂದರೆ ಇಬ್ಬರ ನಡುವೆ ಒಳಒಪ್ಪಂದ ನಡೆದಿದೆ. ಈ ನಿಟ್ಟಿನಲ್ಲಿ ವಿತ್ತ ಸಚಿವ ಜೇಟ್ಲಿ ಅವರು ರಾಜೀನಾಮೆ ನೀಡಬೇಕು ಮತ್ತು ಘಟನೆ ಬಗ್ಗೆ ತನಿಖೆ ನಡೆಸಬೇಕು ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ