ಮೂರು ಬ್ಯಾಂಕ್ಗಳ ವಿಲೀನ
Team Udayavani, Sep 18, 2018, 6:45 AM IST
ಹೊಸದಿಲ್ಲಿ: ಭಾರತೀಯ ಸ್ಟೇಟ್ ಬ್ಯಾಂಕ್ನ ಐದು ಸಹವರ್ತಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ಮುಕ್ತಾಯವಾಗಿ ವರ್ಷದ ಬಳಿಕ ಕೇಂದ್ರ ಸರಕಾರ ಮತ್ತೆ ಮೂರು ಬ್ಯಾಂಕ್ಗಳ ವಿಲೀನ ಘೋಷಣೆ ಮಾಡಿದೆ. ಅತ್ತಾವರ ಬಾಲಕೃಷ್ಣ ಶೆಟ್ಟಿ ಅವರಿಂದ ಸ್ಥಾಪಿತಗೊಂಡಿರುವ ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ಗಳ ವಿಲೀನ ನಿರ್ಧಾರ ಪ್ರಕಟಿಸಿದೆ. ಈ ಪ್ರಕ್ರಿಯೆ ಮುಕ್ತಾಯದ ಬಳಿಕ ಅದು ದೇಶದ ಮೂರನೇ ಅತೀ ದೊಡ್ಡ ಬ್ಯಾಂಕ್ ಎಂಬ ಹೆಗ್ಗ ಳಿಕೆಗೆ ಪಾತ್ರವಾಗಲಿದೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಹಣ ಕಾಸು ಸೇವೆಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಸೋಮವಾರ ದಿಲ್ಲಿಯಲ್ಲಿ ಆಯೋಜಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ವಿಲೀನ ಪ್ರಕ್ರಿಯೆ ಯಿಂದ ದೇಶದ ಬ್ಯಾಂಕಿಂಗ್ ಕ್ಷೇತ್ರ ಮತ್ತಷ್ಟು ಬಲಗೊಳ್ಳಲಿದೆ. ಸಾಲ ನೀಡುವ ಬಲ ಅವುಗಳಿಗೆ ಸಿಗಲಿದೆ. ಇತ್ತೀಚಿನ ದಿನಗಳಲ್ಲಿ ಸಾಲ ನೀಡುವ ಬ್ಯಾಂಕ್ಗಳ ಶಕ್ತಿ ಕುಂದುತ್ತಿದೆ. ಇದರಿಂದಾಗಿ ಕಾರ್ಪೊರೇಟ್ ಕ್ಷೇತ್ರದಲ್ಲಿನ ಹೂಡಿಕೆಗಳಿಗೆ ಹಿನ್ನಡೆಯಾಗುತ್ತಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?