ಅಂತರ್ಜಾತಿ ವಿವಾಹ ಹಿನ್ನೆಲೆ: ಹೈದರಾಬಾದ್ನಲ್ಲಿ ಹಲ್ಲೆ
Team Udayavani, Sep 20, 2018, 6:00 AM IST
ಹೈದರಾಬಾದ್: ಅಂತರ್ಜಾತಿಯ ವಿವಾಹವಾಗಿರುವ ಮತ್ತೂಂದು ಯುವ ಜೋಡಿ ಮೇಲೆ ಹೈದರಾಬಾದ್ನಲ್ಲಿ ಹಲ್ಲೆ ನಡೆಸಲಾಗಿದೆ. ಯುವತಿಯ ತಂದೆಯೇ ಈ ಕೃತ್ಯವೆಸಗಿದ್ದಾನೆ. ಮಾಧವಿ ಮತ್ತು ಸಂದೀಪ್ ಎಂಬುವರು ಹೆತ್ತವರ ಆಶಯಕ್ಕೆ ವಿರುದ್ಧವಾಗಿ ವಿವಾಹವಾಗಿದ್ದರು. ಮಗಳನ್ನು ಭೇಟಿಯಾಗಬೇಕು ಎಂದು ತಂದೆ ಮನೋಹರಾಚಾರಿ ಹೇಳಿದ್ದ. ಅದನ್ನು ನಿರಾಕರಿಸಲು ಸಾಧ್ಯವಾಗದ ಯುವ ದಂಪತಿ ಹೈದರಾಬಾದ್ನ ಮುತ್ತಿನ ನಗರಿಯ ಎಸ್.ಆರ್.ನಗರದಲ್ಲಿ ಭೇಟಿಯಾಗುವುದಾಗಿ ಸಮಯ ನಿಗದಿಪಡಿಸಿದರು. ಸ್ಥಳಕ್ಕೆ ಅವರು ಬರುತ್ತಿದ್ದಂತೆಯೇ ಸಂದೀಪ್ ಮತ್ತು ಮಾಧವಿ ಮೇಲೆ ಮನಬಂದಂತೆ ಥಳಿಸಿದ್ದಾನೆ. ಈ ಘಟನೆಯಿಂದ ಮಾಧವಿ ಆಘಾತಕ್ಕೆ ಒಳಗಾಗಿದ್ದು ಮಾತ್ರವಲ್ಲದೆ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿ ದ್ದಾರೆ. ಅವರ ಪತಿ ಸಂದೀಪ್ಗೆ ಕೂಡ ಭಾರಿ ಪ್ರಮಾಣದಲ್ಲಿ ಗಾಯಗಳಾಗಿವೆ. ಪೊಲೀಸರು ಕೇಸು ದಾಖಲಿಸಿ ತಂದೆಗಾಗಿ ಶೋಧ ನಡೆಸಿದ್ದಾರೆ. ಇಬ್ಬರು ಕಲಿಯುತ್ತಿರುವ ವೇಳೆ ಪ್ರೇಮಾಂಕುರವಾಗಿತ್ತು. ಮಾಧವಿ ಕುಟುಂಬವರು ಮೇಲ್ವರ್ಗಕ್ಕೆ ಸೇರಿದವರು. ಹೀಗಾಗಿ, ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಕಳೆದ ವಾರ ನಲ್ಗೊಂಡಾದಲ್ಲಿ ಮೇಲ್ಜಾತಿ ಯುವತಿ ಮದುವೆಯಾಗಿದ್ದ R ದಲಿತ ಕ್ರಿಶ್ಚಿಯನ್ ಸಮುದಾಯದ ಯುವಕನನ್ನು 1 ಕೋಟಿ ರೂ. ನೀಡಿ ಹತ್ಯೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು