ಕಾಸರಗೋಡು ಯುವಕನ ಗಡೀಪಾರು, ಬಂಧನ
Team Udayavani, Sep 20, 2018, 6:00 AM IST
ಹೊಸದಿಲ್ಲಿ: ಕಳೆದ ವರ್ಷ ಕೇರಳದ ಕಾಸರಗೋಡಿನಿಂದ ನಾಪತ್ತೆಯಾದ 14 ಜನರ ಪೈಕಿ ಓರ್ವನನ್ನು ಅಫ್ಘಾನಿಸ್ತಾನದಿಂದ ಗಡೀಪಾರು ಮಾಡಲಾಗಿದೆ. ನಶಿದುಲ್ ಹಮ್ಝಫರ್ನನ್ನು ಐಸಿಸ್ ಉಗ್ರ ಸಂಘಟನೆ ಸೇರುವುದಕ್ಕಾಗಿ ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದಲ್ಲಿ ಗಡೀಪಾರು ಮಾಡಲಾಗಿದೆ. ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನವು ಐಸಿಸ್ ಉಗ್ರನೊಬ್ಬನನ್ನು ಭಾರತಕ್ಕೆ ಗಡೀಪಾರು ಮಾಡಿದೆ. ಕಾಬೂಲ್ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಈತನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
2017 ಅಕ್ಟೋಬರ್ 3 ರಂದು ಕಾಸರಗೋಡಿನಿಂದ ಇತರ 13 ಮಂದಿಯೊಂದಿಗೆ ದೇಶ ತೊರೆದಿದ್ದ. ಮಸ್ಕಟ್, ಓಮನ್ಗೆ ತೆರಳಿ, ಅಲ್ಲಿಂದ ಇರಾನ್ಗೆ ಹೋಗಿದ್ದ ಇವರು, ನಂತರ ಕಾಬೂಲ್ಗೆ ತೆರಳಿದ್ದರು. ಅಲ್ಲಿ ಅವರನ್ನು ಬಂಧಿಸಲಾಗಿತ್ತು. ನಶಿದುಲ್ ಸಾಮಾಜಿಕ ಮಾಧ್ಯಮಗಳ ಮೂಲಕ ಉಗ್ರ ಸಂಚು ರೂಪಿಸಿದ್ದ. ಈತನಿಗೆ ಇತರ ಸಹವರ್ತಿಗಳೂ ನೆರವಾಗಿದ್ದರು ಎಂದು ಎನ್ಐಎ ವರದಿ ಮಾಡಿದೆ. ಈತನನ್ನು ಈಗ ಕೊಚ್ಚಿಗೆ ಕರೆತಂದು ಇಲ್ಲಿ ವಿಚಾರಣೆ ನಡೆಸಲಾಗುತ್ತದೆ.
2018 ಮಾರ್ಚ್ 30ರ ವೇಳೆಗೆ 90 ಕೇರಳಿಗರು ಐಸಿಸ್ಗೆ ಸೇರಿದ್ದಾರೆ ಎಂದು ವರದಿಯಾಗಿತ್ತು. ಈ ಪೈಕಿ 16 ಜನರು ಅಮೆರಿಕ ಹಾಗೂ ಇತರ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಸಿಲುಕಿ ಹತರಾಗಿದ್ದಾರೆ. 90 ಜನರ ಪೈಕಿ 21 ಜನರು ಕಾಸರಗೋಡು ಹಾಗೂ 38 ಜನರು ಕಣ್ಣೂರಿನವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ