ನಾಲಿಗೆ ಕತ್ತರಿಸುವ ಬೆದರಿಕೆ
Team Udayavani, Sep 23, 2018, 6:00 AM IST
ಹೈದರಾಬಾದ್: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇನೆ ಎಂದು ಸಂಸದ ಜೆ.ಸಿ.ದಿವಾಕರ ರೆಡ್ಡಿ ವಿರುದ್ಧ ಆಂಧ್ರಪ್ರದೇಶದ ಕದಿರಿ ಪೊಲೀಸ್ ಇನ್ಸ್ಪೆಕ್ಟರ್ ಮಾಧವ್ ಗುಡುಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ರೆಡ್ಡಿ, ನಾಲಿಗೆ ಕತ್ತರಿಸಿಕೊಳ್ಳಲು ಎಲ್ಲಿ ಬರಬೇಕು ಹೇಳಿ, ಬರುತ್ತೇನೆ ಎಂದಿದ್ದಾರೆ. ಅಲ್ಲದೆ ಇನ್ಸ್ಪೆಕ್ಟರ್ ವಿರುದ್ಧª ತಡಿಪಟ್ರಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದಾರೆ. ಇತ್ತೀಚೆಗೆ ನಡೆದ ಗುಂಪು ಘರ್ಷಣೆ ವೇಳೆ ಪೊಲೀಸರು ಹೇಡಿಗಳಂತೆ ಓಡಿಹೋಗಿದ್ದಾರೆ ಎಂದು ಸಂಸದ ರೆಡ್ಡಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇನ್ಸ್ಪೆಕ್ಟರ್ ಮಾಧವ್, ಯಾವುದೇ ಹಾಲಿ, ಮಾಜಿ ಸಂಸದರು, ಶಾಸಕರು ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ನಾಲಿಗೆ ಸೀಳುತ್ತೇನೆ. ನಮ್ಮ ಸಹನೆಗೂ ಮಿತಿಯಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ