ದೂರು ನಿರ್ವಹಣೆ ಅಧಿಕಾರಿ ನೇಮಕ
Team Udayavani, Sep 24, 2018, 1:10 PM IST
ಹೊಸದಿಲ್ಲಿ: ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕು ಎಂಬ ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಾಟ್ಸ್ಆ್ಯಪ್ ಈಗ ಭಾರತಕ್ಕೆಂದು ದೂರು ನಿರ್ವಹಣೆ ಅಧಿಕಾರಿಯನ್ನು ನೇಮಿಸಿದೆ. ದೂರು ನಿರ್ವಹಣೆ ಅಧಿಕಾರಿಯಾಗಿ ಕೋಮಲ್ ಲಾಹಿರಿ ಅವರನ್ನು ನೇಮಕ ಮಾಡಿರುವ ಬಗ್ಗೆ ವಾಟ್ಸ್ಆ್ಯಪ್ ತನ್ನ ವೆಬ್ಸೈಟ್ನಲ್ಲಿ ವಿವರಿಸಿದ್ದು, ದೂರುಗಳಿದ್ದರೆ ಅವರಿಗೆ ವರದಿ ಮಾಡುವಂತೆ ಸೂಚಿಸಿದೆ. ಮೂಲಗಳ ಪ್ರಕಾರ ಕೋಮಲ್ರನ್ನು ಆಗಸ್ಟ್ ಕೊನೆಯ ವಾರದಲ್ಲಿ ನೇಮಕ ಮಾಡಲಾಗಿದೆ.
ಭಾರತಕ್ಕಾಗಿ ದೂರು ನಿರ್ವಹಣೆ ಅಧಿಕಾರಿಯನ್ನು ನೇಮಿಸಬೇಕು ಎಂದು ಭಾರತ ಸರಕಾರ ಹಿಂದಿನಿಂದಲೂ ಆಗ್ರಹಿಸುತ್ತಿತ್ತು. ಇತ್ತೀಚೆಗೆ ವಾಟ್ಸ್ ಆ್ಯಪ್ನಲ್ಲಿ ಹರಡಿದ ಸುಳ್ಳು ಸುದ್ದಿಗಳಿಂದಾಗಿ ಸಾಮೂಹಿಕ ಥಳಿಸಿ ಹತ್ಯೆಯಂಥ ಪ್ರಕರಣಗಳು ನಡೆದಿದ್ದವು. ಇದು ವಾಟ್ಸ್ಆ್ಯಪ್ ಮೇಲೆ ಒತ್ತಡ ಹೆಚ್ಚಿಸಿತ್ತು. ಹೀಗಾಗಿ ಹಲವು ಕ್ರಮಗಳನ್ನು ವಾಟ್ಸ್ಆ್ಯಪ್ ಕೈಗೊಂಡಿತ್ತಾದರೂ, ಇವು ಸುಳ್ಳು ಸುದ್ದಿಗಳ ಹರಡುವಿಕೆ ತಡೆಯುವಲ್ಲಿ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ ಎಂದು ಸರಕಾರ ಆರೋಪಿಸುತ್ತಲೇ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’