ಡಾ.ರಾಜ್ಕುಮಾರ್ ಅಪಹರಣ ಕೇಸ್;ಎಲ್ಲಾ 9 ಆರೋಪಿಗಳು ಖುಲಾಸೆ
Team Udayavani, Sep 25, 2018, 11:26 AM IST
ಈರೋಡ್: ವರನಟ ಡಾ.ರಾಜ್ ಕುಮಾರ್ ಅವರ ಅಪಹರಣ ಪ್ರಕರಣದ ಎಲ್ಲಾ 9 ಮಂದಿ ಆರೋಪಿಗಳನ್ನು ಈರೋಡ್ನ ಜಿಲ್ಲಾ ಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.
ಪ್ರಾಸಿಕ್ಯೂಶನ್ ಮತ್ತು ಪೊಲೀಸ್ ಇಲಾಖೆ ಅಪಹರಣದ ಕುರಿತು ಸಾಕ್ಷ್ಯ ನೀಡುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ.
18 ವರ್ಷಗಳ ಹಿಂದೆ 30 ಜುಲೈ 2000 ದಲ್ಲಿ , ಕುಖ್ಯಾತ ದಂತಚೋರ, ನರಹಂತಕ ವೀರಪ್ಪನ್ ಡಾ.ರಾಜ್ ಅವರನ್ನು ಗಾಜನೂರಿನಲ್ಲಿನ ತೋಟದ ಮನೆಯಿಂದ ಅಪಹರಿಸಿದ್ದ. ಡಾ.ರಾಜ್ ಅವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿ ಅವರೂ ಕೂಡ ಅಪಹರಣಕ್ಕೊಳಗಾಗಿದ್ದರು. 108 ದಿನಗಳ ಬಳಿಕ ಬಿಡುಗಡೆ ಮಾಡಲಾಗಿತ್ತು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.