ಕೇರಳದಲ್ಲಿ ಮತ್ತೆ ಭಾರೀ ಮಳೆ ಸಂಭವ 


Team Udayavani, Oct 5, 2018, 4:50 AM IST

rain-4-10.jpg

ಕೊಚ್ಚಿ/ಚೆನ್ನೈ: ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೇರಳ ಮತ್ತೂಂದು ಸುತ್ತಿನ ಅವಘಡಕ್ಕೆ ಸಾಕ್ಷಿಯಾಗಲಿದೆಯೇ? ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರದಿಂದ ಮಳೆಯ ತೀವ್ರತೆ ಅತಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಕೇರಳಿಗರು ಮತ್ತೆ ಭೀತಿಗೊಳಗಾಗಿದ್ದಾರೆ. ಅಲ್ಲದೆ, ಕಾಸರಗೋಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿ, ಅಪಾರ ಹಾನಿ ಸಂಭವಿಸಿದೆ.

ಶುಕ್ರವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಆರಂಭಿಸಿದೆ. ಅ.7ರಂದು ವರುಣ ಆರ್ಭಟಿಸಲಿದ್ದು, ಕೇರಳದಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮಲಪ್ಪುರಂ ಅಣೆಕಟ್ಟಿನ 4 ಕ್ರಸ್ಟ್‌ ಗೇಟ್‌ಗಳನ್ನು ಗುರುವಾರವೇ ತೆರೆಯಲಾಗಿದೆ. ಮಳೆಯಿಂದಾಗಿ ಕಾಸರಗೋಡಿನ ಬಸ್‌ ನಿಲ್ದಾಣದ ಚಾವಣಿ ಕುಸಿದುಬಿದ್ದಿದೆ. ಮೊಬೈಲ್‌ ಟವರ್‌ಗಳು, ಮರಗಳು, ಜಾಹೀರಾತು ಫ‌ಲಕಗಳು ಧರೆಗುರುಳಿವೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಶುಕ್ರವಾರ ಅದು ಚಂಡಮಾರುತವಾಗಿ ಮಾರ್ಪಾಡಾಗಿ ಒಮನ್‌ ಕಡೆಗೆ ಸಾಗಲಿದೆ. ಆದರೆ, ಅದರ ಪರಿಣಾಮವೆಂಬಂತೆ, ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೀನುಗಾರರಿಗೆ ಸೂಚನೆ: ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಅ.5-8ರವರೆಗೆ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಈಗಾಗಲೇ ಮೀನುಗಾರಿಕೆಗೆಂದು ತೆರಳಿರುವವರಿಗೆ ಅ.5 ರೊಳಗೆ ವಾಪಸ್‌ ಬರುವಂತೆ ಸಂದೇಶ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ.ನಾಡಿನಲ್ಲೂ ರೆಡ್‌ ಅಲರ್ಟ್‌: ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಅ.7ರಂದು ಎಲ್ಲ ಜಿಲ್ಲೆಗಳಲ್ಲೂ ರೆಡ್‌ ಅಲರ್ಟ್‌ ಘೋಷಿಸಿದೆ. ನೀರಿನ ಹರಿವಿನ ಪ್ರದೇಶಗಳಲ್ಲಿ ಒತ್ತುವರಿ ತೆರವು ಮಾಡಲು ಸರ್ಕಾರ ಈಗಾಗಲೇ 100 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಕೊಳಚೆ ತೆರವು ಕಾರ್ಯವೂ ನಡೆಯುತ್ತಿದೆ. ವಿಪತ್ತು ನಿರ್ವಹಣಾ ಪಡೆ ಕೂಡ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಉದಯಕುಮಾರ್‌ ತಿಳಿಸಿದ್ದಾರೆ.

ಪ್ರವಾಸಿಗರು ಅತಂತ್ರ
ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್ನಾರ್‌ಕೊಯಿಲ್‌ ಮತ್ತು ತಿರುಚಿರಾಪಳ್ಳಿಯ ಕುಲ್ಲಂಬಾಡಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 11 ಸೆಂ.ಮೀ. ಮಳೆ ದಾಖಲಾಗಿದೆ. ರಾಮೇಶ್ವರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ, ಪ್ರವಾಸಿಗರು ಅತಂತ್ರರಾಗಿದ್ದಾರೆ.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.