ಬಿಹಾರ: ಹೆಮ್ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸುಪ್ರೀಂ ಕೆಂಡಾಮಂಡಲ
Team Udayavani, Oct 8, 2018, 3:44 PM IST
ಹೊಸದಿಲ್ಲಿ : ಬಿಹಾರದ ಮುಜಫರನಗದ ಆಸರೆ ಗೃಹಗಳಲ್ಲಿ ಮತ್ತು ಸುಪೋಲ್ ಶಾಲಾ ಹೆಣ್ಣು ಮಕ್ಕಳ ಮೇಲೆ ಈ ರೀತಿಯ ಲೈಂಗಿಕ ದೌರ್ಜನ್ಯ ನಡೆಯಲು ಹೇಗೆ ಸಾಧ್ಯ ಎಂದು ಇಂದು ಸೋಮವಾರ ಕೆಂಡಾಮಂಡಲವಾಗಿ ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಬಿಹಾರದಲ್ಲಿ ಹೆಮ್ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತೀವ್ರ ಆಘಾತ, ಕಳವಳ ವ್ಯಕ್ತಪಡಿಸಿದೆ.
“ಪ್ರತಿಕೆಗಳಲ್ಲಿ ಪ್ರಕಟಗೊಂಡಿರುವ ಈ ಕುರಿತ ವರದಿಗಳು ನಿಜಕ್ಕೂ ಒಳ್ಳೆಯದಲ್ಲ. ಶಾಲಾ ಹುಡುಗಿಯರ ಅಸ್ಥಿಪಂಜರ ಪತ್ತೆಯಾಗಿರುವುದು, ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಲು ಯತ್ನಿಸಿದ 34 ಹೆಮ್ಮಕ್ಕಳನ್ನು ಹೊಡೆದು ಹಲ್ಲೆ ಮಾಡಿರುವುದು, ಇಂಥವೆಲ್ಲ ದಿನ ನಿತ್ಯ ಎಂಬಂತೆ ಏಕೆ ಸಂಭವಿಸುತ್ತಿವೆ; ಹೆಮ್ಮಕ್ಕಳನ್ನು ನೋಡಿ ಕೊಳ್ಳುವ ರೀತಿಯ ಇದೇ ಏನು ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಸುಪೋಲ್ ಘಟನೆ ಸಂಬಂಧ ಪೊಲೀಸರು ಈ ವರೆಗೆ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕ ಮತ್ತು ಓರ್ವ ಮಹಿಳೆ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ.
ಮುಜಫರನಗರದ ಆಸರೆ ಗೃಹಗಳಲ್ಲಿ ಸುಮಾರು 40 ಬಾಲಕಿಯರ ಮೇಲೆ ಅತ್ಯಾಚಾರ,ಲೈಂಗಿಕ ದೌರ್ಜನ್ಯ ನಡೆದಿತ್ತು. ಆ ಪೈಕಿ ಒಬ್ಟಾಕೆಯನ್ನು ಕೊಲ್ಲಲಾಗಿದ್ದು ಅನಂತರ ಆಕೆಯ ಕೊಲೆಯನ್ನು ಮುಚ್ಚಿ ಹಾಕಲು ಆಕೆಯ ಮೃತ ದೇಹವನ್ನು ಹುಗಿದು ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ