ಕತ್ತು ಸೀಳಿದ ಗಾಳಿಪಟದ ದಾರ;ಸ್ಕೂಟರ್ ಸವಾರೆಯಾಗಿದ್ದ ವೈದ್ಯೆ ದುರ್ಮರಣ
Team Udayavani, Oct 9, 2018, 12:47 PM IST
ಪುಣೆ: ಗಾಳಿ ಪಟದ ಚೈನಾ ಮಾಂಜಾ ದಾರ ಕತ್ತು ಸೀಳಿದ ಪರಿಣಾಮ ಫ್ಲೈಓವರ್ನಲ್ಲಿ ಸ್ಕೂಟರ್ ಸವಾರೆಯಾಗಿ ತೆರಳುತ್ತಿದ್ದ ಯುವ ವೈದ್ಯೆ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಬೋಸಾರಿ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ.
26 ರ ಹರೆಯದ ಆಯುರ್ವೇದ ವೈದ್ಯೆ ಕೃಪಾಲಿ ನಿಕ್ಕಂ ಅವರು ಮೃತ ದುರ್ದೈವಿ. ಹಾರಾಡುತ್ತಿದ್ದ ಗಾಳಿಪಟದ ಮಾಂಜಾ ದಾರ ಕತ್ತನ್ನು ಸೀಳಿದ ಪರಿಣಾಮ ಏಕಾಏಕಿ ಸ್ಕೂಟರ್ನಿಂದ ಕುಸಿದು ಬಿದ್ದಿದ್ದಾರೆ. ಕತ್ತಿನ ಭಾಗದಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ಆಕೆ ಮಾತನಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
20 ನಿಮಿಷಗಳ ಕಾಲ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಯಾವುದೇ ವಾಹನಗಳು ಲಭ್ಯವಾಗಲಿಲ್ಲ. ಆ ಬಳಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಗಾಜು, ಲೋಹದ ತುಣುಕು, ಬಳೆಚೂರುಗಳನ್ನು ನಯವಾಗಿ ಪುಡಿಮಾಡಿ ದಾರಕ್ಕೆ ಲೇಪನ ಮಾಡಿ ಚೈನಾ ಮಾಂಜಾ ಹೆಸರಿನಲ್ಲಿ ಗಾಳಿಪಟದ ದಾರವನ್ನಾಗಿ ಬಳಸಲಾಗುತ್ತದೆ. ಇದು ಮಾರಕವಾಗಿದ್ದು ಸಾವಿರಾರು ಪಕ್ಷಿಗಳು ಸಾವನ್ನಪ್ಪಿವೆ. ಹಲವರಿಗೆ ಗಾಯಗಳೂ ಆಗಿದ್ದವು. ನಿಷೇಧವಿದ್ದರೂ ಚೈನಾ ಮಾಂಜಾ ದಾರಗಳ ಮಾರಾಟ ಮತ್ತು ಹಾರಾಟ ಎಗ್ಗಿಲ್ಲದೆ ಮುಂದುವರಿದಿರುವುದು ದುರಂತಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ