ಕಚ್ಚಿದ ಬೃಹತ್ ಹಾವನ್ನು ತುಂಡು ತುಂಡು ಮಾಡಿ ಪ್ರಾಣ ಬಿಟ್ಟ ರೈತ
Team Udayavani, Oct 16, 2018, 1:34 PM IST
ಮಂಡ್ಯ: ರೈತನೊಬ್ಬ ತನಗೆ ಕಡಿದ ವಿಷಕಾರಿ ಹಾವನ್ನು ತುಂಡು ತುಂಡು ಮಾಡಿ ಪ್ರಾಣ ಬಿಟ್ಟ ದಾರುಣ ಘಟನೆ ಮಳವಳ್ಳಿ ತಾಲೂಕಿನ ಯತ್ತಂಬಾಡಿ ಗ್ರಾಮದಲ್ಲಿ ನಡೆದಿದೆ.
ದೊಡ್ಡಚೆನ್ನೀಪುರ ಗ್ರಾಮದ ನಿವಾಸಿಯಾಗಿರುವ ಪುಟ್ಟಮಾದು(35) ಮೃತ ದುರ್ದೈವಿ.
ರೇಷ್ಮೆ ಹುಳು ಸಾಕಾಣಿಕೆ ಮಾಡುತ್ತಿದ್ದ ಪುಟ್ಟಮಾದು ಅವರು ಸೋಮವಾರ ಬೆಳಗ್ಗೆ ರೇಷ್ಮೆ ಹುಳುವಿಗೆ ಹಿಪ್ಪುನೇರಳೆ ಸೊಪ್ಪು ತರಲು ತೋಟಕ್ಕೆ ತೆರಳಿದ್ದ ವೇಳೆ ವಿಷಪೂರಿತ ಕೊಳಕುಮಂಡಲ ಹಾವು ಪುಟ್ಟಮಾದುವಿಗೆ ಕಡಿದಿದೆ.
ಪುಟ್ಟಮಾದು ಅವರು ಈ ವೇಳೆ ಉಡುದಾರವನ್ನು ಬಳಸಿ ಕೊಂಡು ಹಾವು ಕಡಿದ ಮೇಲ್ಬಾಗದಲ್ಲಿ ಕಾಲಿಗೆ ಕಟ್ಟಿಕೊಂಡಿದ್ದಾರೆ. ಕೈಯಲ್ಲಿದ್ದ ಮಚ್ಚಿನ್ನು ಬಳಸಿ ಹಾವನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿದ್ದಾರೆ.
ಈ ವೇಳೆ ಜೋರಾಗಿ ಕೂಗಿಕೊಂಡಿದ್ದು,ಸುತ್ತಮುತ್ತಲಿನ ಜಮೀನಿನಲ್ಲಿದ್ದವರು ನೆರವಿಗೆ ಧಾವಿಸಿದ್ದಾರೆ. ಕೂಡಲೆ ಹಲಗೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವಿಷವೇರಿ ಪುಟ್ಟಮಾದು ಕೊನೆಯುಸಿರೆಳೆದಿದ್ದಾರೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್