ಮಾಡೆಲ್ ಮಾನ್ಸಿ ದೀಕ್ಷಿತ್ ಕೊಲೆ
Team Udayavani, Oct 17, 2018, 8:35 AM IST
ಮುಂಬಯಿ: ಮಾಡೆಲಿಂಗ್ ಆಗುವ ಬಯಕೆಯಿಂದ ರಾಜಸ್ಥಾನದ ಕೋಟಾದಿಂದ ಮುಂಬಯಿಗೆ ಆಗಮಿಸಿದ್ದ ಮಾನ್ಸಿ ದೀಕ್ಷಿತ್ (19) ಅವರನ್ನು ಕೊಲೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸ್ನೇಹಿತ ಮುಜಾಮಿಲ್ ಸಯ್ಯದ್ ಎಂಬಾತನನ್ನು ಬಂಗೂರ್ ನಗರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಂಧೇರಿಯಲ್ಲಿನ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಹೈದರಾಬಾದ್ ಮೂಲದ ಸಯ್ಯದ್ ಜತೆಗೆ ದೀಕ್ಷಿತ್ ಗೆಳೆತನ ಹೊಂದಿದ್ದರು. ಸೋಮವಾರ ಗೆಳೆಯನನ್ನು ನೋಡಲು ಅವರು ಅಪಾರ್ಟ್ಮೆಂಟ್ಗೆ ತೆರಳಿದ್ದು, ಅಲ್ಲಿ ಅವರಿಬ್ಬರ ನಡುವೆ ಯಾವುದೊ ವಿಚಾರಕ್ಕೆ ಜಗಳವಾಗಿದೆ. ಆಗ, ಕುಪಿತಗೊಂಡ ಸಯ್ಯದ್ ಮಾರಕಾಸ್ತ್ರವೊಂದರಿಂದ ಮಾನ್ಸಿ ಮೇಲೆ ಹಲ್ಲೆ ಮಾಡಿದ್ದು, ಆಕೆ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಸಯ್ಯದ್ ಆಕೆಯ ದೇಹವನ್ನು ಬೃಹತ್ ಸೂಟ್ಕೇಸೊಂದರಲ್ಲಿ ತುಂಬಿ ಮುಂಬಯಿಯ ಮಲಾಡ್ ಪ್ರಾಂತ್ಯಕ್ಕೆ ಸೋಮವಾರ ಮಧ್ಯ ರಾತ್ರಿ ಟ್ಯಾಕ್ಸಿಯೊಂದರಲ್ಲಿ ಕೊಂಡೊಯ್ದು ಬಿಸಾಕಿದ್ದಾನೆ ಎಂದು ಪೊಲೀಸರು ಅನುಮಾನಿಸಿದ್ದಾರೆ. ಸಯ್ಯದ್ ಸೂಟ್ಕೇಸ್ ಬಿಸಾಡಿದ್ದ ರೀತಿಯನ್ನು ಗಮನಿಸಿ ಅನುಮಾನಗೊಂಡ ಟ್ಯಾಕ್ಸಿ ಚಾಲಕ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ