ಹುಣಸೂರಿನಲ್ಲಿ ಕಾರು ಅಪಘಾತ: ಹಿಂದಿ ಚಿತ್ರದ ಸ್ಟಂಟ್ ಮಾಸ್ಟರ್ ಸಾವು
Team Udayavani, Oct 17, 2018, 3:54 PM IST
ಮೈಸೂರು : ಹುಣಸೂರು ತಾಲೂಕಿನ ಯಶೋಧಪುರ ಗ್ರಾಮದ ಬಳಿ ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿಯಾಗಿ ಸಂಭವಿಸಿದ ಭೀಕರ ಅವಘಡದಲ್ಲಿ ಹಿಂದಿ ಚಿತ್ರದ ಸ್ಟಂಟ್ ಮಾಸ್ಟರ್ ಮುನ್ನಾಭಾಯಿ (42) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಇವರ ಜತೆಗಿದ್ದ ಇಬ್ಬರು ಸ್ನೇಹಿತರಾದ ಅರುಣ್ ಕುಮಾರ್ ಮತ್ತು ಕಾರು ಚಾಲಕ ಉಮೇಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಮುನ್ನಾಭಾಯಿ ಮತ್ತು ಜತೆಗಾರರು ಕಾರಿನಲ್ಲಿ ಚಿತ್ರೀಕರಣ ನಿಮಿತ್ತ ಬೆಂಗಳೂರಿನಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದರು.
ಮೃತ ಮುನ್ನಾಭಾಯಿ ಅವರು ಮಹಮ್ಮದ ಅಸ್ಲಾಂ ಅವರ ಪುತ್ರರಾಗಿದ್ದು ಮುಂಬಯಿ ವಾಸಿಯಾಗಿದ್ದಾರೆ ಮತ್ತು ಹಲವಾರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಈಚೆಗೆ ಕನ್ನಡ ಚಿತ್ರವೊಂದರಲ್ಲಿ ನಟಿಸಲು ಒಪ್ಪಿಕೊಂಡು ಇಲ್ಲಿಗೆ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?