ಮೀ ಟೂ; ಅಕ್ಬರ್ ಗೌರವಕ್ಕೆ ಧಕ್ಕೆ, ರಮಣಿ ವಿರುದ್ಧದ ಅರ್ಜಿ ವಿಚಾರಣೆ
Team Udayavani, Oct 18, 2018, 4:07 PM IST
ನವದೆಹಲಿ: ಮೀ ಟೂ ಅಭಿಯಾನದಡಿ 20 ವರ್ಷದ ಹಿಂದೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಸಚಿವ ಎಂಜೆ ಅಕ್ಬರ್ ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಗುರುವಾರ ಪಟಿಯಾಲಾ ಹೌಸ್ ಕೋರ್ಟ್ ನಡೆಸಿ, ಅಕ್ಟೋಬರ್ 31ಕ್ಕೆ ವಿಚಾರಣೆ ಮುಂದೂಡಿದೆ.
ಎಂಜೆ ಅಕ್ಬರ್ ಪರ ಹಿರಿಯ ವಕೀಲರಾದ ಗೀತಾ ಲೂತ್ರಾ ಅವರು, ಮೀ ಟೂ ಅಭಿಯಾನದಡಿಯಲ್ಲಿ ರಮಣಿ ಅವರು ಮಾಡಿದ್ದ ಹಲವು ಟ್ವೀಟ್ ಗಳನ್ನು ಉದಾಹರಣೆಯಾಗಿ ವಿವರಿಸಿ, ಇದರಿಂದಾಗಿ ವಿದೇಶಾಂಗ ಇಲಾಖೆಯ ಸಹಾಯಕ ಮಾಜಿ ಸಚಿವ ಎಂಜೆ ಅಕ್ಬರ್ ಅವರ ಗೌರವಕ್ಕೆ ಧಕ್ಕೆ ತಂದಿದೆ ಎಂದು ವಾದಿಸಿದ್ದನ್ನು ಹೆಚ್ಚುವರಿ ಮುಖ್ಯ ಮೆಟ್ರೋಪೋಲಿಟಿಯನ್ ಮ್ಯಾಜಿಸ್ಟ್ರೇಟ್ ಸಮಾರ್ ವಿಶಾಲ್ ಅವರು ಪುರಸ್ಕರಿಸಿದ್ದು, ವಿಚಾರಣೆ ಅ.31ಕ್ಕೆ ಮುಂದೂಡಿದರು.
ಎಂಜೆ ಅಕ್ಬರ್ ಅವರ ವಿರುದ್ದ ಮೊದಲಿಗೆ ಪತ್ರಕರ್ತೆ ಪ್ರಿಯಾ ರಮಣಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಟ್ವೀಟ್ ಮಾಡಿ ಆರೋಪಿಸಿದ್ದರು. ಬಳಿಕ ಸುಮಾರು 20ಕ್ಕೂ ಹೆಚ್ಚು ಸಹೋದ್ಯೋಗಿ ಪತ್ರಕರ್ತೆಯರು ದೂರಿದ್ದರು. ತಮ್ಮ ಮೇಲಿನ ಆರೋಪ ಸುಳ್ಳು ಎಂದು ಅಕ್ಬರ್ ಸಮಜಾಯಿಷಿ ನೀಡಿದ್ದರು. ಕೊನೆಗೆ ಬುಧವಾರ ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ