‘ಇದು ರೈಲು ಅವಘಡ ಅಲ್ಲ, ಯಾರಿಗೂ ಪರಿಹಾರ ಇಲ್ಲ’ : ಭಾರತೀಯ ರೈಲ್ವೆ
Team Udayavani, Oct 20, 2018, 3:34 PM IST
ಹೊಸದಿಲ್ಲಿ : ‘ಅಮೃತಸರ ಅವಘಡವನ್ನು ತಾನು ರೈಲು ಅಪಘಾತಗಳ ಪಟ್ಟಿಗೆ ಸೇರಿಸುವುದಿಲ್ಲ. ಇದೊಂದು ರೈಲು ಅಪಘಾತ ಅಲ್ಲ, ಹಾಗಾಗಿ ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡುವುದಿಲ್ಲ’ ಎಂದು ಭಾರತೀಯ ರೈಲ್ವೆ ಹೇಳಿದೆ.
ಕೇಂದ್ರ ಸಹಾಯಕ ರೈಲ್ವೆ ಸಚಿವ ಮನೋಜ್ ಸಿನ್ಹಾ ಅವರು “ಘಟನೆಯ ಬಗ್ಗೆ ಯಾವುದೇ ತನಿಖೆಯನ್ನು ಕೈಗೊಳ್ಳುವ ಅಗತ್ಯ ರೈಲ್ವೇ ಗೆ ಇಲ್ಲ; ರೈಲಿನ ಚಾಲಕರಿಗೆ ಎಲ್ಲಿ ರೈಲನ್ನು ನಿಧಾನವಾಗಿ ಚಲಾಯಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಸೂಚನೆಗಳಿದ್ದವು; ಅವಘಡ ನಡೆದಲ್ಲಿ ತಿರುವುಗಳಿದ್ದವು; ಹಾಗಾಗಿ ರೈಲಿನ ಚಾಲಕರಿಗೆ ಜನರು ಹಳಿಯಲ್ಲಿ ನಿಂತಿರುವುದು ಗೋಚರಿಸಿರಲಿಲ್ಲ. ಹಾಗಾಗಿ ನಾವು ಯಾವುದರ ಬಗ್ಗೆ ತನಿಖೆ ನಡೆಸಬೇಕು ? ರೈಲುಗಳಿರುವುದೇ ವೇಗವಾಗಿ ಸಾಗಲು’ ಎಂದು ಹೇಳಿದ್ದಾರೆ.
ನ್ಯಾಯಾಂಗ ತನಿಖೆ: ಕ್ಯಾಪ್ಟನ್ ಅಮರೀಂದರ್ ಸಿಂಗ್
ಅಮೃತಸರ ರೈಲು ಅವಘಡ ನಡೆದು ಒಂದು ದಿನದ ತರುವಾಯ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಇಂದು ಶನಿವಾರ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಳುಗಳನ್ನು ಭೇಟಿಯಾದರಲ್ಲ ಅವಘಡದ ನ್ಯಾಯಾಂಗ ತನಿಖೆಗೆ ಆದೇಶಿಸಿದರು.
ರೈಲು ದುರಂತವನ್ನು ಎಲ್ಲ ಆಯಾಮಗಳಿಂದ ತನಿಖೆ ಮಾಡಲಾಗುವುದು ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ರೈಲು ದುರಂತದ ಸಂತ್ರಸ್ತರ ಬಗ್ಗೆ ಪಂಜಾಬ್ ಮತ್ತು ಇಡಿಯ ರಾಷ್ಟ್ರದ ಜನರ ಸಹಾನುಭೂತಿ ಇದೆ. ಘಟನೆಯ ತನಿಖೆಗಾಗಿ ಆಳಕ್ಕೆ ಇಳಿಯುವ ಬದ್ಧತೆ ಪಂಜಾಬ್ ಸರಕಾರಕ್ಕೆ ಇದೆ; ಹೆಚ್ಚಿನ ಮೃತ ದೇಹಗಳನ್ನು ಈಗಾಗಲೇ ಗುರುತಿಸಲಾಗಿದ್ದು ಈಗ ಕೇವಲ 9 ಮೃತದೇಹಗಳು ಮಾತ್ರವೇ ಬಾಕಿ ಉಳಿದಿವೆ; ಅವುಗಳನ್ನೂ ಬೇಗನೆ ಗುರುತಿಸಲಾಗುವುದು ; ನಾವು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು ನಾಲ್ಕು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಕೋರಿದ್ದೇವೆ’ ಎಂದು ಸಿಎಂ ಅಮರೀಂದರ್ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ