ಕಾಳಸಂತೆಯಲ್ಲಿ ತಿರುಪತಿ ಲಡ್ಡು ಮಾರಾಟ?
Team Udayavani, Oct 21, 2018, 8:50 AM IST
ತಿರುಮಲ: ತಿರುಮಲದ ತಿಮ್ಮಪ್ಪನ ಸನ್ನಿಧಾನದಲ್ಲಿ ವೈಭವಯುತ ನವರಾತ್ರಿ ಆಚರಣೆಗಳು ಜರಗಿದ ಬೆನ್ನಲ್ಲೇ ಟಿಟಿಡಿಗೆ ಹಗರಣವೊಂದು ಸುತ್ತಿಕೊಂಡಿದೆ. ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದವನ್ನು ಟಿಟಿಡಿ ಸಿಬಂದಿಯೇ ಕಾಳಸಂತೆಯಲ್ಲಿ ಮಾರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಪ್ರತಿಬಾರಿಯಂತೆ ಈ ಬಾರಿಯೂ ಜರಗುವ “ಗರುಡ ಸೇವೆ’ಯನ್ನು ನೋಡಲು ಅಪಾರ ಭಕ್ತರು ಆಗಮಿಸುವುದನ್ನು ಮೊದಲೇ ಮನಗಂಡಿದ್ದ ತಿರುಪತಿ ತಿರುಮಲ ದೇವಸ್ಥಾನಂ ಅ. 14, 15, 16ರಂದು ಭಕ್ತರಿಗೆ ಅಂದಾಜು 30,000 ಲಡ್ಡುಗಳ ಹಂಚಿಕೆಗಾಗಿ 100 ರೂ. ಮತ್ತು 50 ರೂ. ಮುಖಬೆಲೆಯ ಎರಡು ಮಾದರಿಯ ಟೋಕನ್ಗಳನ್ನು ವಿತರಿಸುವಂತೆ ಸಿಬಂದಿಗೆ ಸೂಚಿಸಿತ್ತು. ಆದರೆ, ಟಿಕೆಟ್ ವಿತರಣ ಕೌಂಟರ್ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರ ಪೈಕಿ ಕೆಲವರು ಈ ಟೋಕನ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಆ ಮೂಲಕ ಸುಮಾರು 14,000 ಲಡ್ಡುಗಳನ್ನು ಅಕ್ರಮವಾಗಿ ಹಂಚಿದ್ದಾರೆಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಭದ್ರತಾ ಅಧಿಕಾರಿ ಹಲವರ ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ